Sunday, June 15, 2025
Google search engine
Homeರಾಜ್ಯರಾಜ್ಯದ ಹಿರಿಯ ಅರ್ಥಶಾಸ್ತ್ರಜ್ಞ, ಪ್ರಾಧ್ಯಾಪಕ, ಲೇಖಕ, ಮಲೆನಾಡಿನ ಹೆಮ್ಮೆಯ ಡಾ// ಎಚ್, ಆರ್ ಕೃಷ್ಣಮೂರ್ತಿ ಇನ್ನಿಲ್ಲ..!!

ರಾಜ್ಯದ ಹಿರಿಯ ಅರ್ಥಶಾಸ್ತ್ರಜ್ಞ, ಪ್ರಾಧ್ಯಾಪಕ, ಲೇಖಕ, ಮಲೆನಾಡಿನ ಹೆಮ್ಮೆಯ ಡಾ// ಎಚ್, ಆರ್ ಕೃಷ್ಣಮೂರ್ತಿ ಇನ್ನಿಲ್ಲ..!!

ಶಿವಮೊಗ್ಗ : ಮೂಲತಃ ತೀರ್ಥಹಳ್ಳಿ ತಾಲೂಕಿನ ಹೊಸಬೀಡು ಗ್ರಾಮದ ಎಚ್ಆರ್ ಕೃಷ್ಣಮೂರ್ತಿಯವರು ಮಲೆನಾಡಿನ ಸಾಹಿತ್ಯಕ ಹೋರಾಟಗಳಲ್ಲಿ ಬೆಳೆದವರು ಇವರು ತಮ್ಮ ಸುದೀರ್ಘ ಬೋಧನದ ಅವಧಿಯಲ್ಲಿ ಅರ್ಥಶಾಸ್ತ್ರ, ಸಾಮಾನ್ಯ ಜ್ಞಾನದ ಬಗ್ಗೆ 60ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ. ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಪ್ರೀತಿ ಪಾತ್ರರಾಗಿದ್ದ ಇವರು ತಮ್ಮ ಪತ್ನಿ ಕಲ್ಪನಾ ಮೂರ್ತಿ, ಪುತ್ರಿ ಪ್ರಿಯಾಂಕ, ಪುತ್ರ ಅಭಿಷೇಕ್, ಹಾಗೂ ಅಪಾರ ಸ್ನೇಹಿತರನ್ನು, ಹಿತೈಷಿಗಳನ್ನು, ಬಂಧುಗಳನ್ನು , ಬಿಟ್ಟು ನಿನ್ನೆ ಅಂದರೆ ಶನಿವಾರ ರಾತ್ರಿ ನಿಧನರಾಗಿದ್ದಾರೆ ಎನ್ನುವುದು ದುಃಖದ ಸಂಗತಿ.

ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಸುದೀರ್ಘ 36 ವರ್ಷಗಳ ಸೇವೆ :

ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ದೀರ್ಘ ಮೂವತ್ತಾರು ವರ್ಷಗಳ ಸೇವೆ ಸಲ್ಲಿಸಿದ ಇವರು ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಾದ ಜಯನಗರ, ಬಸವನಗುಡಿ ನ್ಯಾಷನಲ್ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು.

ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್ ಡಿ ಪದವಿ :

ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್ ಡಿ ಪದವಿ ಪಡೆದಿದ್ದರು. ಮೈಸೂರು ವಿಶ್ವವಿದ್ಯಾನಿಲಯದ RANK ವಿದ್ಯಾರ್ಥಿಯಾಗಿದ್ದರು. ವಿಶ್ವವಿದ್ಯಾನಿಲಯದ ಅನುದಾನದ ಆಯೋಗ (UGC) ನವದೆಹಲಿಯ ಪರಮರ್ಷನ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದರು. ಹಲವಾರು ವಿಚಾರ ಸಂಕಿರಣಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳುತ್ತಿದ್ದರು.

ಅರೆಕಾಲಿಕ ಲೇಖಕರಾಗಿ ವರದಿಗಾರರಾಗಿ ಸೇವೆ :

ರಾಷ್ಟ್ರ ಮತ್ತು ರಾಜ್ಯದ ಪ್ರತಿಷ್ಠಿತ ಪತ್ರಿಕೆಗಳಾದ, ಪ್ರಜಾವಾಣಿ ಡೆಕ್ಕನ್ ಹೆರಾಲ್ಡ್ ಗಳಿಗೆ ನಿರಂತರವಾಗಿ ವರದಿ ಮಾಡುವುದು ಲೇಖನವನ್ನು ನೀಡುವುದು ಇವರ ಹವ್ಯಾಸಗಳಲ್ಲಿ ಒಂದಾಗಿತ್ತು. ಈ ಮೂಲಕ ಅರೆಕಾಲಿಕ ವರದಿಗಾರರಾಗಿ, ಲೇಖಕರಾಗಿ,ಪ್ರಸಿದ್ಧಿ ಪಡೆದಿದ್ದರು.

ಇಂತಹ ಮೇರು ವ್ಯಕ್ತಿತ್ವದ ಮಲೆನಾಡಿನಲ್ಲಿ ಹುಟ್ಟಿ ತಮ್ಮ ಸುದೀರ್ಘ ಸೇವೆಯನ್ನು ನಾಡಿನಾದ್ಯಂತ ನೀಡಿದ ಡಾ// ಎಚ್, ಆರ್ ಕೃಷ್ಣಮೂರ್ತಿ ಅವರಿಗೆ ನ್ಯೂಸ್ ವಾರಿಯರ್ಸ್ ಪತ್ರಿಕಾ ಬಳಗದ ವತಿಯಿಂದ ಭಾವಪೂರ್ವ ಶ್ರದ್ದಾಂಜಲಿಗಳು…

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!