Monday, June 16, 2025
Google search engine
Homeಶಿವಮೊಗ್ಗನಿನ್ನೆಯ ಸಾಗರ ಉಪವಿಭಾಗ ಆಸ್ಪತ್ರೆಯ ಇಂಜೆಕ್ಷನ್ ರಿಯಾಕ್ಷನ್ ಆದ ಕಥೆ..! ಶಿವಮೊಗ್ಗ ಜಿಲ್ಲೆಯ ಯಾವುದೇ...

ನಿನ್ನೆಯ ಸಾಗರ ಉಪವಿಭಾಗ ಆಸ್ಪತ್ರೆಯ ಇಂಜೆಕ್ಷನ್ ರಿಯಾಕ್ಷನ್ ಆದ ಕಥೆ..! ಶಿವಮೊಗ್ಗ ಜಿಲ್ಲೆಯ ಯಾವುದೇ ಸರ್ಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ ಆಗದ ಇಂಜೆಕ್ಷನ್ ರಿಯಾಕ್ಷನ್ ಪದೇ ಪದೇ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಆಗುತ್ತಿರುವುದಕ್ಕೆ ಕಾರಣವೇನು ಗೊತ್ತಾ..?ಕೆಲ ವೈದ್ಯರ ಮರ್ಮ – ರೋಗಿಗಳ ಕರ್ಮ..!!

ಸಾಗರ:- ಶಿವಮೊಗ್ಗ ಜಿಲ್ಲೆಯಲ್ಲಿರುವ ಸರ್ಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ ಎಲ್ಲೂ ಆಗದ ಇಂಜೆಕ್ಷನ್ ರಿಯಾಕ್ಷನ್ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಆಗುತ್ತಿರುವ ಹಿಂದೇ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಹಾಗೂ ಸಾಗರೀಕರು ಸಾಗರ ತಾಲ್ಲೂಕು ಉಪ ವಿಭಾಗೀಯ ಆಸ್ಪತ್ರೆ ಆಡಳಿತದಲ್ಲೇಲ್ಲೋ ಲೋಪ ಕಂಡುಬರುತ್ತಿದೆ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಕೆಲ ವೈದ್ಯರ ಮರ್ಮ – ರೋಗಿಗಳ ಕರ್ಮ:

ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಒಟ್ಟು ವೈದ್ಯರ ಪೈಕಿ ಶೇಕಡಾ 98% ವೈದ್ಯರುಗಳು ಕರ್ತವ್ಯ ಸಮಯದಲ್ಲೇ ಖಾಸಗಿ ಕ್ಲಿನಿಕ್ ನಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದೂ, ಲಕ್ಷಕ್ಕೂ ಮೀರಿ ಸಾರ್ವಜನಿಕ ತೆರಿಗೆ ಹಣದಿಂದ ಸಂಬಳ ಪಡೆಯುತ್ತಿರುವ ಇಂತಹ ವೈದ್ಯರಿಗೆ ಈ ರೀತಿ ಬಡ ರೋಗಿಗಳಿಗೆ ಮಾಡುತ್ತಿರುವ ಮೋಸವಲ್ಲವೇ ಅವರ ಆತ್ಮವು ಕ್ಷಮಿಸಬಲ್ಲದೇ…….?!

ಜನಪ್ರಿಯ ಶಾಸಕರಾದ ಹರತಾಳು ಹಾಲಪ್ಪ ರವರೇ , ತಮ್ಮ ಕ್ಷೇತ್ರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಚ್ಚಿನ ವೈದ್ಯರುಗಳು ಖಾಸಗಿ ಕ್ಲಿನಿಕ್ ನಲ್ಲಿ ಕರ್ತವ್ಯ ಸಮಯದಲ್ಲಿ ಚಿಕಿತ್ಸೆ ನೀಡುತ್ತಿರುವುದು, ಬಡ ರೋಗಿಗಳು ಉಪ ವಿಭಾಗೀಯ ಆಸ್ಪತ್ರೆಯಲ್ಲಿರುವ ಆಯಾಆಯಾ ವೈದ್ಯರ ಕೊಠಡಿ ಮುಂದೇ ಕಾಯುತ್ತಾ ದಿನಗಟ್ಟಲೇ ಕುಳಿತಿರುವುದು ತಮ್ಮ ಗಮನಕ್ಕೆ ಬಂದಿಲ್ಲವೇ …….?!

ಕಣ್ಣಿದ್ದೂ ಕುರುಡರಾದ ಉಪ ವಿಭಾಗೀಯ ಅಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲಾ ಆರೋಗ್ಯ ಅಧಿಕಾರಿಗಳು….

ಇನ್ನೂ ಮುಂದಾದರೂ ಆಡಳಿತ ರೂಢರೂ, ಸಾಗರ ಉಪ ವಿಭಾಗೀಯ ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿಯವರು ಸಾಗರ ಉಪ ವಿಭಾಗೀಯ ಆಸ್ಪತ್ರೆಯ ಕೆಲ ವೈದ್ಯರುಗಳು ಕರ್ತವ್ಯ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಗೆ ಕೈಕೊಟ್ಟು ಖಾಸಗಿ ಆಸ್ಪತ್ರೆ ನೆಡೆಸುತ್ತಿರುವ ” ವೈದ್ಯೋ ನಾರಾಯಣ ಹರಿಃ ” ಎಂಬ ಧ್ಯೇಯ ವಾಕ್ಯಕ್ಕೆ ಚ್ಯುತಿಯನ್ನು0ಟು ಮಾಡುತ್ತಿರುವ ವೈದ್ಯರಿಗೆ ತಕ್ಕ ಪಾಠ ಕಲಿಸುತ್ತಾರೋ….?! ಸಾಮಾಜಿಕ ನ್ಯಾಯದಡಿ ವೈದ್ಯರು ಬಡ ರೋಗಿಗಳಿಗೆ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕರ್ತವ್ಯ ಸಮಯದಲ್ಲಾದರೂ ಸೂಕ್ತ ಚಿಕಿತ್ಸೆಗೆ ಅನುವು ಮಾಡಿಕೊಡುತ್ತಾರೋ…….?! ಕಾದು ನೋಡೋಣ .

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!