Wednesday, April 30, 2025
Google search engine
Homeಶಿವಮೊಗ್ಗನಿನ್ನೆಯ ಸಾಗರ ಉಪವಿಭಾಗ ಆಸ್ಪತ್ರೆಯ ಇಂಜೆಕ್ಷನ್ ರಿಯಾಕ್ಷನ್ ಆದ ಕಥೆ..! ಶಿವಮೊಗ್ಗ ಜಿಲ್ಲೆಯ ಯಾವುದೇ...

ನಿನ್ನೆಯ ಸಾಗರ ಉಪವಿಭಾಗ ಆಸ್ಪತ್ರೆಯ ಇಂಜೆಕ್ಷನ್ ರಿಯಾಕ್ಷನ್ ಆದ ಕಥೆ..! ಶಿವಮೊಗ್ಗ ಜಿಲ್ಲೆಯ ಯಾವುದೇ ಸರ್ಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ ಆಗದ ಇಂಜೆಕ್ಷನ್ ರಿಯಾಕ್ಷನ್ ಪದೇ ಪದೇ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಆಗುತ್ತಿರುವುದಕ್ಕೆ ಕಾರಣವೇನು ಗೊತ್ತಾ..?ಕೆಲ ವೈದ್ಯರ ಮರ್ಮ – ರೋಗಿಗಳ ಕರ್ಮ..!!

ಸಾಗರ:- ಶಿವಮೊಗ್ಗ ಜಿಲ್ಲೆಯಲ್ಲಿರುವ ಸರ್ಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ ಎಲ್ಲೂ ಆಗದ ಇಂಜೆಕ್ಷನ್ ರಿಯಾಕ್ಷನ್ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಆಗುತ್ತಿರುವ ಹಿಂದೇ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಹಾಗೂ ಸಾಗರೀಕರು ಸಾಗರ ತಾಲ್ಲೂಕು ಉಪ ವಿಭಾಗೀಯ ಆಸ್ಪತ್ರೆ ಆಡಳಿತದಲ್ಲೇಲ್ಲೋ ಲೋಪ ಕಂಡುಬರುತ್ತಿದೆ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಕೆಲ ವೈದ್ಯರ ಮರ್ಮ – ರೋಗಿಗಳ ಕರ್ಮ:

ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಒಟ್ಟು ವೈದ್ಯರ ಪೈಕಿ ಶೇಕಡಾ 98% ವೈದ್ಯರುಗಳು ಕರ್ತವ್ಯ ಸಮಯದಲ್ಲೇ ಖಾಸಗಿ ಕ್ಲಿನಿಕ್ ನಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದೂ, ಲಕ್ಷಕ್ಕೂ ಮೀರಿ ಸಾರ್ವಜನಿಕ ತೆರಿಗೆ ಹಣದಿಂದ ಸಂಬಳ ಪಡೆಯುತ್ತಿರುವ ಇಂತಹ ವೈದ್ಯರಿಗೆ ಈ ರೀತಿ ಬಡ ರೋಗಿಗಳಿಗೆ ಮಾಡುತ್ತಿರುವ ಮೋಸವಲ್ಲವೇ ಅವರ ಆತ್ಮವು ಕ್ಷಮಿಸಬಲ್ಲದೇ…….?!

ಜನಪ್ರಿಯ ಶಾಸಕರಾದ ಹರತಾಳು ಹಾಲಪ್ಪ ರವರೇ , ತಮ್ಮ ಕ್ಷೇತ್ರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಚ್ಚಿನ ವೈದ್ಯರುಗಳು ಖಾಸಗಿ ಕ್ಲಿನಿಕ್ ನಲ್ಲಿ ಕರ್ತವ್ಯ ಸಮಯದಲ್ಲಿ ಚಿಕಿತ್ಸೆ ನೀಡುತ್ತಿರುವುದು, ಬಡ ರೋಗಿಗಳು ಉಪ ವಿಭಾಗೀಯ ಆಸ್ಪತ್ರೆಯಲ್ಲಿರುವ ಆಯಾಆಯಾ ವೈದ್ಯರ ಕೊಠಡಿ ಮುಂದೇ ಕಾಯುತ್ತಾ ದಿನಗಟ್ಟಲೇ ಕುಳಿತಿರುವುದು ತಮ್ಮ ಗಮನಕ್ಕೆ ಬಂದಿಲ್ಲವೇ …….?!

ಕಣ್ಣಿದ್ದೂ ಕುರುಡರಾದ ಉಪ ವಿಭಾಗೀಯ ಅಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲಾ ಆರೋಗ್ಯ ಅಧಿಕಾರಿಗಳು….

ಇನ್ನೂ ಮುಂದಾದರೂ ಆಡಳಿತ ರೂಢರೂ, ಸಾಗರ ಉಪ ವಿಭಾಗೀಯ ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿಯವರು ಸಾಗರ ಉಪ ವಿಭಾಗೀಯ ಆಸ್ಪತ್ರೆಯ ಕೆಲ ವೈದ್ಯರುಗಳು ಕರ್ತವ್ಯ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಗೆ ಕೈಕೊಟ್ಟು ಖಾಸಗಿ ಆಸ್ಪತ್ರೆ ನೆಡೆಸುತ್ತಿರುವ ” ವೈದ್ಯೋ ನಾರಾಯಣ ಹರಿಃ ” ಎಂಬ ಧ್ಯೇಯ ವಾಕ್ಯಕ್ಕೆ ಚ್ಯುತಿಯನ್ನು0ಟು ಮಾಡುತ್ತಿರುವ ವೈದ್ಯರಿಗೆ ತಕ್ಕ ಪಾಠ ಕಲಿಸುತ್ತಾರೋ….?! ಸಾಮಾಜಿಕ ನ್ಯಾಯದಡಿ ವೈದ್ಯರು ಬಡ ರೋಗಿಗಳಿಗೆ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕರ್ತವ್ಯ ಸಮಯದಲ್ಲಾದರೂ ಸೂಕ್ತ ಚಿಕಿತ್ಸೆಗೆ ಅನುವು ಮಾಡಿಕೊಡುತ್ತಾರೋ…….?! ಕಾದು ನೋಡೋಣ .

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...