Friday, May 2, 2025
Google search engine
Homeರಾಜ್ಯಸನಾತನದ ಗುರುಪೂರ್ಣಿಮೆಯ ನಿಮಿತ್ತ ಮಹಿಳಾ ಸ್ವ-ಸಹಾಯ ಸಂಗಾತಿ ಸಂಘದ 25 ನೇ ವಾರ್ಷಿಕೋತ್ಸವದಲ್ಲಿ ಧರ್ಮ ಜಾಗೃತಿ...

ಸನಾತನದ ಗುರುಪೂರ್ಣಿಮೆಯ ನಿಮಿತ್ತ ಮಹಿಳಾ ಸ್ವ-ಸಹಾಯ ಸಂಗಾತಿ ಸಂಘದ 25 ನೇ ವಾರ್ಷಿಕೋತ್ಸವದಲ್ಲಿ ಧರ್ಮ ಜಾಗೃತಿ ಪ್ರವಚನ..!!

ಬೆಂಗಳೂರಿನ ಜಯನಗರದ ‘ಸಂಗಾತಿ ಸಂಘ’ ಮಹಿಳಾ ಸ್ವ-ಸಹಾಯ ಸಂಘದ 25 ನೇ ವಾರ್ಷಿಕೋತ್ಸವದ ನಿಮಿತ್ತ ಸನಾತನ ಸಂಸ್ಥೆಯ ವತಿಯಿಂದ ಗುರುಪೂರ್ಣಿಮೆ ಮಹತ್ವದ ಪ್ರವಚನವನ್ನು ನೀಡಲಾಯಿತು, 250 ಕ್ಕೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದು ಈ ಪ್ರವಚನದ ಲಾಭ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಶ್ರೀಮತಿ ಧನಲಕ್ಷ್ಮೀ ವಿ.ಕೆ ಇವರು ಮಾತನಾಡಿ, ಆಷಾಢ ಹುಣ್ಣಿಮೆಯಂದು ಗುರುಪೂರ್ಣಿಮೆ ಮಹೋತ್ಸವವನ್ನು ಎಲ್ಲೆಡೆ ಆಚರಿಸಲಾಗುತ್ತದೆ. ವರ್ಷಾದ್ಯಂತ ಪ್ರತಿಯೊಬ್ಬ ಗುರುಗಳು ತಮ್ಮ ಭಕ್ತರಿಗೆ ಅಧ್ಯಾತ್ಮದ ಬೋಧಾಮೃತವನ್ನು ನೀಡುತ್ತಿರುತ್ತಾರೆ. ಆ ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವುದು ಗುರುಪೂರ್ಣಿಮೆ ಆಚರಿಸುವುದರ ಹಿಂದಿನ ಉದ್ದೇಶವಾಗಿದೆ. ಇಂದು ಸಮಾಜದಲ್ಲಿ ಅನ್ಯಾಯ, ಅತ್ಯಾಚಾರ, ಕೊಲೆ, ದರೋಡೆ, ಭ್ರಷ್ಠಾಚಾರ, ಸುಲಿಗೆ, ಧಂಗೆ ಮುಂತಾದ ಘಟನೆಗಳು ಮೀತಿ ಮೀರಿದೆ. ಇದನ್ನು ತಡೆಯುವುದು ಇದರ ವಿರುದ್ಧ ಹೋರಾಟ ಮಾಡುವುದು ನಮ್ಮ ಧರ್ಮಕರ್ತವ್ಯವೇ ಅಗಿದೆ. ಹಾಗಾಗಿ ಹಿಂದೂ ಧರ್ಮದ ಆಚರಣೆಯನ್ನು ಅರ್ಥ ಮಾಡಿಕೊಳ್ಳೋಣ, ನಮ್ಮ ಮಕ್ಕಳಿಗೆ ಧರ್ಮಶಿಕ್ಷಣವನ್ನು ನೀಡೋಣ ಮತ್ತು ಅನ್ಯಾಯದ ವಿರುದ್ಧ ಹೋರಾಡೋಣ ಎಂದು ಕರೆ ನೀಡಿದರು. ಪ್ರತಿಯೊಬ್ಬರು ಸಹ ಜುಲೈ 13 ರಂದು ಭವಾನಿ ಕಲ್ಯಾಣ ಮಂಟಪದಲ್ಲಿ ನಡೆಯುವ ಗುರುಪೂರ್ಣಿಮಾ ಮಹೋತ್ಸವದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿ ಮಾಡೋಣ ಎಂದು ಸಂಕಲ್ಪ ಮಾಡಿದರು.

ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸೌ. ಮಾಧುರಿ, ಶ್ರೀಮತಿ ಧನಲಕ್ಷ್ಮೀ ವಿ.ಕೆ, ‘ಸಂಗಾತಿ ಸಂಘ’ ದ ಕಾರ್ಯದರ್ಶಿಗಳಾದ ಸೌ. ರೇವತಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.


ವಿನೋದ ಕಾಮತ,
ವಕ್ತಾರರು, ಸನಾತನ ಸಂಸ್ಥೆ,
ಸಂಪರ್ಕ : ೯೩೪೨೫ ೯೯೨೯೯
….

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...