
ಬೆಂಗಳೂರು: ಇದೇ ತಿಂಗಳ ನಾಲ್ಕರಂದು ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೀಡಾಗಿರುವ ಎಡಿಜಿಪಿ ಅಮೃತ್ ಪೌಲ್ ಬೇಡಿಕೆ ಕೇಳಿ ಸ್ವತಃ ಸಿಐಡಿ ಅಧಿಕಾರಿಗಳೇ ಕಂಗಾಲಾಗಿದ್ದು.
ಜುಲೈ 4ರಂದು ಬಂಧನಕ್ಕೀಡಾಗಿದ್ದ ಅಮೃತ್ ಪೌಲ್ ಅವರನ್ನು ಸಿಐಡಿ ಕಸ್ಟಡಿಗೆ ಪಡೆಯಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ಜೈಲಿನಲ್ಲಿ ವಿಚಾರಣೆ ವೇಳೆ ಅಧಿಕಾರಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಮಾಜಿ ಎಡಿಜಿಪಿ:
ತನಗೆ ಟೆನ್ ಶನ್ ಆಗುತ್ತಿದೆ, ನಿದ್ದೆ ಬರುತ್ತಿಲ್ಲ. ಸಿಗರೇಟ್ ಹಾಗೂ ವಿಸ್ಕಿ ತಂದು ಕೊಡುವಂತೆ ಬೇಡಿಕೆ ಇಡುತ್ತಿದ್ದಾರೆ. ಇದನ್ನೆಲ್ಲ ತಂದುಕೊಡಲು ಜೈಲ್ ರೂಲ್ಸ್ ಗಳು ಒಪ್ಪುವುದಿಲ್ಲ. ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದರು ಒಪ್ಪುತ್ತಿಲ್ಲ ಎನ್ನಲಾಗುತ್ತಿದೆ.
ಮಾಜಿ ಎಡಿಜಿಪಿಯ ತನಿಖಾ ವರದಿಯನ್ನು ಸಿಐಡಿ ಅಧಿಕಾರಿ ಡಿಜಿಪಿ ಸಂಧೂ ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಹೈಕೋರ್ಟ್ ಏನು ತೀರ್ಪು ನೀಡುತ್ತದೆ ಕಾದು ನೋಡಬೇಕು…
ಒಟ್ಟಿನಲ್ಲಿ ಆನಿರೀಕ್ಷಿತ ಬೆಳವಣಿಗೆಯಲ್ಲಿ ಬಂಧನ ಕೊಳ್ಳಗಾಗಿರುವ ಮಾಜಿ ಎಡಿಜಿಪಿ ಅಮೃತ್ ಪಾಲ್ ಆತಂಕಕ್ಕೆ ಒಳಗಾಗಿದ್ದು. ಪ್ರಕರಣ ಯಾವ ತಿರುವು ಪಡೆದುಕೊಳ್ಳುತ್ತದೆ ಕಾದುನೋಡಬೇಕು.
ರಘುರಾಜ್ ಹೆಚ್.ಕೆ…9449553305….