Wednesday, April 30, 2025
Google search engine
Homeರಾಷ್ಟ್ರೀಯಅಮರನಾಥಕ್ಕೆ ಹೋಗಿದ್ದ ಶಿವಮೊಗ್ಗದ ಮಾಜಿ ಉಪಮೇಯರ್ ರೇಖಾ ಮುರಳಿಧರ್ ಸೇರಿದಂತೆ ಎಲ್ಲ16 ಜನ ಮಹಿಳೆಯರು ಸೇಫ್...

ಅಮರನಾಥಕ್ಕೆ ಹೋಗಿದ್ದ ಶಿವಮೊಗ್ಗದ ಮಾಜಿ ಉಪಮೇಯರ್ ರೇಖಾ ಮುರಳಿಧರ್ ಸೇರಿದಂತೆ ಎಲ್ಲ16 ಜನ ಮಹಿಳೆಯರು ಸೇಫ್ ‌‌..! ಪ್ರವಾಸ ರದ್ದು ಮಾಡಿ ವಾಪಸ್ ಹೊರಟ ಮಹಿಳೆಯರ ತಂಡ..!!

ಶಿವಮೊಗ್ಗ: ಅಮರನಾಥ ದೇಗುಲದ ಬಳಿ ಮೇಘಸ್ಫೋಟಗೊಂಡಿದ್ದು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಬೆನ್ನಲ್ಲೇ ಅಮರನಾಥಕ್ಕೆ ತೆರಳಿದ ಎಲ್ಲರಲ್ಲೂ ಭಯ ಕಾಡುತ್ತಿದೆ..

ಶಿವಮೊಗ್ಗದಿಂದ ತೆರಳಿದ ಮಹಿಳೆಯರ ತಂಡ ಸುರಕ್ಷಿತ:

ಶಿವಮೊಗ್ಗದಿಂದ ಮಹಿಳೆಯರ ತಂಡ ಯಾತ್ರೆಗೆ ತೆರಳಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ಆದರೆ ಮೇಘಸ್ಫೋಟದ ಹಿನ್ನೆಲೆಯಲ್ಲಿ ಯಾತ್ರೆ ರದ್ದುಗೊಂಡಿದ್ದು ಸೋಮವಾರ ಶಿವಮೊಗ್ಗಕ್ಕೆ ವಾಪಸಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಳೆದ ಜುಲೈ 4ರಂದು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿದ್ದ ಮಹಿಳೆಯರು ಬೆಂಗಳೂರಿನಿಂದ ವೈಷ್ಣೋದೇವಿ ದರ್ಶನ ಪಡೆದು, ಬಳಿಕ ಅಮರನಾಥ ದರ್ಶನಕ್ಕೆ ಹೋಗಿದ್ದಾರೆ. ಮಾಜಿ ಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ 16 ಮಂದಿ ಮಹಿಳೆಯರು ಯಾತ್ರೆಗೆ ಹೋಗಿದ್ದಾರೆ. ಪ್ರಸ್ತುತ ಇವರೆಲ್ಲರೂ ಅಮರನಾಥ ಸಮೀಪದ ಪಹಲ್ಗಾಮ್ ಬೇಸ್ ಕ್ಯಾಂಪ್​ನಲ್ಲಿ ಇದ್ದಾರೆ.

ಪೂರ್ವ ನಿಗದಿಯಂತೆ ನಿನ್ನೆಯೇ ಅಮರನಾಥ ದರ್ಶನಕ್ಕೆ ಈ ತಂಡ ಹೋಗಬೇಕಿತ್ತು. ಜುಲೈ 5ರಂದು ಪ್ರತಿಕೂಲ ಹವಾಮಾನ ಹಿನ್ನೆಲೆ ಅಮರನಾಥ ದರ್ಶನವನ್ನು ಮುಂದೂಡಲ್ಪಟ್ಟಿತ್ತು. ಸ್ಥಳೀಯ ಆಡಳಿತದ ಸೂಚನೆಯಂತೆ ನಿನ್ನೆಯೇ ದರ್ಶನಕ್ಕೆ ತೆರಳಲು ಬೇಸ್ ಕ್ಯಾಂಪ್ ಮಹಿಳಾ ತಂಡ ಹೋಗಿತ್ತು. ಆದರೆ ದರ್ಶನಕ್ಕೆ ಹೋಗಲಾಗದೇ ಬೇಸ್ ಕ್ಯಾಂಪ್ ನಿಂದ ವಾಪಸ್ ಆಗಿತ್ತು. ಇದೀಗ ಅಮರನಾಥ ಯಾತ್ರೆಯನ್ನೇ ರದ್ದುಗೊಳಿಸಿ, ವಾಪಸ್ ಹೊರಟಿದ್ದಾರೆ ಎನ್ನಲಾಗುತ್ತಿದೆ..

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...