Home ಶಿವಮೊಗ್ಗಆರಗದಲ್ಲಿ ದುರ್ಘಟನೆ..! ಅತಿಯಾದ ಮಳೆಗೆ ಕುಸಿದು ಬಿದ್ದ ಮನೆ..!!

ಆರಗದಲ್ಲಿ ದುರ್ಘಟನೆ..! ಅತಿಯಾದ ಮಳೆಗೆ ಕುಸಿದು ಬಿದ್ದ ಮನೆ..!!

by EDITOR NEWS WARRIORS
0 comments

ತೀರ್ಥಹಳ್ಳಿ : ತಾಲೂಕಿನ ಆರಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿಯಾದ ಮಳೆಯಿಂದ ವಾಮನ ಕಿಣಿಯವರ ಮನೆ ಗೋಡೆ ಕುಸಿತವಾಗಿದೆ.

ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಿನ್ನೆ ತಾಲ್ಲೂಕು ಅಧಿಕಾರಿಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದ್ದು ಅಧಿಕಾರಿಗಳು ದಿನದ 24ಗಂಟೆಯೂ ಅತಿವೃಷ್ಟಿ ವಿಚಾರದಲ್ಲಿ ಕರ್ತವ್ಯಕ್ಕೆ ಸಿದ್ಧರಾಗಿರಬೇಕು ಎಂಬುದಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ . ಆರಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಮನ ಕಿಣಿ ಬಿನ್ ಜನಾರ್ದನ ಕಿಣಿ ಅವರ ಮನೆ ಗೋಡೆ ಭಾರಿ ಮಳೆಯಿಂದ ಕುಸಿದು ಬಿದ್ದಿರುತ್ತದೆ .

ಸುದ್ದಿ ತಿಳಿದ ತಕ್ಷಣ ಗ್ರಾಮ ಪಂಚಾಯ್ತಿ ಸದಸ್ಯ ಮಹೇಶ್ ರವರು ಪಂಚಾಯಿತಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದ್ದಾರೆ ತಾಲೂಕು ಆಡಳಿತಕ್ಕೆ ಮಾಹಿತಿಯನ್ನು ರವಾನಿಸಿದ್ದು .ತೀರ್ಥಹಳ್ಳಿ ತಹಸೀಲ್ದಾರ್ ರವರು ತಕ್ಷಣ ಪರಿಹಾರವನ್ನು ಘೋಷಣೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ .ವಾಸ ಮಾಡುವ ಮನೆಗಳಿಗೆ ಹಾನಿಯಾದಾಗ ತಕ್ಷಣ ಪರಿಹಾರವನ್ನು ನೀಡ ಬೇಕಾದ ಅತಿ ಅಗತ್ಯ ಇದೆ .ಮಳೆಗಾಲದಲ್ಲಿ ಬೇರೆ ವ್ಯವಸ್ಥೆ ಇಲ್ಲದೆ ಮಳೆಯಿಂದ ಹಾನಿಗೆ ಒಳಪಟ್ಟ ಮನೆಗಳನ್ನೇ ಸರಿಪಡಿಸಿಕೊಂಡು ವಾಸ ಮಾಡಬೇಕಾದ ಸ್ಥಿತಿ ಮಲ್ನಾಡ್ ಪ್ರದೇಶದಲ್ಲಿದೆ .ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಳೆಯಿಂದ ರೈತರಿಗೆ ,ಜನರಿಗೆ ,ಯಾವುದೇ ಸ್ವತ್ತುಗಳಿಗೆ ,ಜಮೀನುಗಳಿಗೆ ನಷ್ಟವಾದರೆ ರಸ್ತೆಗೆ, ಕಿರುಸೇತುವೆ ಗಳಿಗೆ ಹಾನಿಯಾದರೆ ನಮ್ಮ ಗಮನಕ್ಕೆ ತಂದರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು .

ಮಾಹಿತಿ: ಲಿಯೊ ಅರೋಜಾ…

#####################################

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...