Wednesday, April 30, 2025
Google search engine
Homeಶಿವಮೊಗ್ಗಹರ್ಷ ಕುಟುಂಬದೊಂದಿಗೆ ನಾನಿದ್ದೇನೆ..! ನ್ಯಾಯ ಖಂಡಿತ ಸಿಗುತ್ತದೆ ಭಯಪಡುವ ಅಗತ್ಯತೆ ಇಲ್ಲ..! ರಾಜೀನಾಮೆ ಕೇಳಲು ಸರ್ವರೂ...

ಹರ್ಷ ಕುಟುಂಬದೊಂದಿಗೆ ನಾನಿದ್ದೇನೆ..! ನ್ಯಾಯ ಖಂಡಿತ ಸಿಗುತ್ತದೆ ಭಯಪಡುವ ಅಗತ್ಯತೆ ಇಲ್ಲ..! ರಾಜೀನಾಮೆ ಕೇಳಲು ಸರ್ವರೂ ಸ್ವತಂತ್ರರು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ..!!

ಶಿವಮೊಗ್ಗ : ಹರ್ಷನ ಅಕ್ಕ ಅಶ್ವಿನಿ ತಮ್ಮ ಬಗ್ಗೆ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಹರ್ಷನ ಕುಟುಂಬದೊಂದಿಗೆ ನಾನಿದ್ದೇನೆ, ಎಲ್ಲವೂ ಬಹಿರಂಗವಾಗಿ ಮಾತನಾಡಲು ಆಗುವುದಿಲ್ಲ ನನ್ನದೆ ಆದ ಇತಿಮಿತಿಗಳಿವೆ ಎಂದು ಪ್ರತಿಕ್ರಿಸಿದರು.

ಅಮರನಾಥ ಯಾತ್ರಿಗಳನ್ನು ಕರೆ ತರಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ :

ಶಿವಮೊಗ್ಗದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರರವರು ಅಮರನಾಥ ಯಾತ್ರಿಗಳನ್ನು ಕರೆತರಲು ತಂಡ ರಚಿಸಲಾಗಿದೆ. ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ಅತಿ ವೃಷ್ಟಿಯಿಂದ ಆಗಿರುವ ಹಾನಿಯ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದರು.

ಹರ್ಷ ಅಕ್ಕನ ಬಳಿ ಸಮಾಧಾನದಿಂದ ಮಾತನಾಡಿದ್ದೇನೆ ಗೃಹ ಸಚಿವರ ಸ್ಪಷ್ಟನೆ :

ಹರ್ಷ ಅಕ್ಕ ಅಶ್ವಿನಿ ಬಳಿ ಸಮಾಧಾನದಿಂದ ಮಾತನಾಡಿದ್ದೇನೆ. ಶ್ರೀರಾಮ ಸೇನೆಯ20 ಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ಬಂದಿದ್ದರು. ಅವರಿಗೂ ಸಹ ಹರ್ಷನ ಅಕ್ಕನ ವರ್ತನೆಯಿಂದ ಬೇಜಾರಾಗಿದೆ ಎಂದರು.

ಗೃಹ ಸಚಿವರಾಗಿ ನನ್ನದೇ ಆದ ಇತಿಮಿತಿಗಳಿವೆ ಎಲ್ಲವನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ :

ಗೃಹ ಸಚಿವನಾಗಿ ನನಗೆ ನನ್ನದೇ ಆದ ಇತಿಮಿತಿಗಳಿದೆ. ಅವರು ಕೇಳುವ ಪ್ರತಿ ವಿಷಯಕ್ಕೂ ಉತ್ತರಿಸಲಾರೆ . ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಸೇರಿದಂತೆ ಎಲ್ಲರೂ ನನ್ನ ರಾಜೀನಾಮೆ ಕೇಳುವುದು ಸಹಜ. ಏನೇ ಆದರೂ ಸಹ ಗೃಹಸಚಿವರದ್ದೇ ರಾಜೀನಾಮೆ ಕೇಳೋದು, ಎನೂ ಮಾಡೋಣ ಎಂದು ನಕ್ಕರು.

ನಾನು ಹರ್ಷ ಕುಟುಂಬದ ಜೊತೆಗೆ ಇದ್ದೇನೆ ಭಯಪಡುವ ಅಗತ್ಯತೆ ಇಲ್ಲ ಕಾನೂನಿನ ಪ್ರಕಾರ ಎಲ್ಲರಿಗೂ ಶಿಕ್ಷೆ ಆಗುತ್ತದೆ ಗೃಹ ಸಚಿವರ ಸ್ಪಷ್ಟನೆ :

ನಾನು ಹರ್ಷನ ಕುಟುಂಬದೊಂದಿಗಿದ್ದೇನೆ. ಪರಪ್ಪನ ಅಗ್ರಹಾರದಿಂದ ಹರ್ಷ ಕೊಲೆ ಆರೋಪಿಗಳು ಮೊಬೈಲ್ ಕರೆಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ತಪ್ಪಿತಸ್ಥರ ವಿರುದ್ದ ಎಫ್ಐ ಆರ್ ದಾಖಲಿಸಲಾಗಿದೆ ಯಾರೇ ತಪ್ಪಿತಸ್ಥರಾದರು ಅವರಿಗೆ ಖಂಡಿತ ಶಿಕ್ಷೆ ಆಗಲಿದೆ ಅದರಲ್ಲಿ ಅನುಮಾನವಿಲ್ಲ. ಎಂದು ಸ್ಪಷ್ಟಪಡಿಸಿದರು..

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...