Wednesday, April 30, 2025
Google search engine
Homeರಾಜ್ಯಅಡಿಗೆ ಅನಿಲ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ...

ಅಡಿಗೆ ಅನಿಲ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆಡಳಿತ ಪಕ್ಷ ಬಿಜೆಪಿ ವಿರುದ್ಧ ರಸ್ತೆ ಮಧ್ಯೆ ಸಿಲಿಂಡರ್ ಇಟ್ಟು ಪ್ರತಿಭಟನೆ..!!

ಶಿವಮೊಗ್ಗ: ಕೇಂದ್ರದ ಜನ ವಿರೋಧಿ ಭ್ರಷ್ಟ ಬಿಜೆಪಿ ಸರ್ಕಾರ ಪದೇಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮಾಡಿ ದೇಶದ ಜನರಿಗೆ ಬರೆ ಮೇಲೆ ಬರೆ ಹಾಕುತ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕಾದ ಸರ್ಕಾರ ಕಣ್ಮುಚ್ಚಿ ಕೂತು ಈಗಾಗಲೇ ಒಂದೇ ವರ್ಷಕ್ಕೆ ಎಂಟು ಬಾರಿ ಅಡುಗೆ ಸಿಲಿಂಡರ್ ದರವನ್ನು ಏರಿಕೆ ಶ್ರೀಸಾಮಾನ್ಯನನ್ನು ಕಿತ್ತು ತಿನ್ನುತ್ತಿರುವುದು ಜನವಿರೋಧಿತನವನ್ನು ಎದ್ದು ತೋರುತ್ತಿದೆ.

ಅಡಿಗೆ ಅನಿಲದ ಬೆಲೆ ಈಗಾಗಲೇ ಸಾವಿರ ರೂ ಗಡಿಯನ್ನು ದಾಟಿದ್ದು ಮತ್ತೆ ಕೇಂದ್ರ ಸರ್ಕಾರ ಅಡಿಗೆ ನಿಂದ ಬೆಲೆಯನ್ನು ರೂ. 50 ಗಳನ್ನು ಏರಿಸಿ, ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಬುಡಮೇಲಾಗಿದ್ದು ಶ್ರೀಸಾಮಾನ್ಯ ಸಂಕಷ್ಟಪಡುವ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೇ ಹೇಳಿದಂತಾಗಿದೆ ಹಲವು ಬಾರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವನ್ನು ನೀಡಿದರು ಸಹ ಯಾವುದೇ ಆರ್ಥಿಕ ವ್ಯವಸ್ಥೆಯನ್ನು ಹತೋಟಿಗೆ ತರವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿ 40% ಕಮಿಷನ್ ಲೂಟಿ ಹೊಡೆಯುತ್ತಾ ಸರ್ಕಾರಿ ಸೌಮ್ಯದ ಸಂಸ್ಥೆಗಳನೆಲ್ಲ ಖಾಸಗಿಕರಣ ಮಾಡುತ್ತಾ , ರೈತರಿಗೆ ಯುವಕರಿಗೆ ಶ್ರೀಸಾಮಾನ್ಯನಿಗೆ ಜನವಿರೋಧಿ ಆಡಳಿತ ನಡೆಯುತ್ತಿರುವ ಭ್ರಷ್ಟ ದಿವಾಳಿತನದ ಕೇಂದ್ರ ಬಿಜೆಪಿ ಸರ್ಕಾರವನ್ನು ಈ ಕೂಡಲೇ ರಾಷ್ಟ್ರಪತಿಗಳು ವಜಾ ಮಾಡಬೇಕೆಂದು ಯುವ ಕಾಂಗ್ರೆಸ್ ಪ್ರತಿಭಟನೆ ಮೂಲಕ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅನಿತಾ ಕುಮಾರಿ, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮಾರೇಶ್, ಗ್ರಾಮಾಂತರಧ್ಯಕ್ಷ ಈಟಿ ನಿತಿನ್ , ಭದ್ರಾವತಿ ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹಮದ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸಚಿನ್ ಸಿಂಧ್ಯಾ, ಶಿಲ್ಪ ಈಶ್ವರ್ , ಮಹಿಳಾ ಕಾಂಗ್ರೆಸ್ ಮುಖಂಡರಾದ ಸುವರ್ಣ ನಾಗರಾಜ್ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಎಮ್ ರಾಹುಲ್ , ಇರ್ಫಾನ್, ಪುಷ್ಪಕ್ ಕುಮಾರ, ಎಂ ರಾಕೇಶ್ , ಇಮ್ರಾನ್ ಸಮೀರ್ ಖಾನ್., ಜಮೀಲ್, ಮೋಹನ್ ಸೋಮಿನಕೊಪ್ಪ, ಸುಹಾಸ್ ಗೌಡ, ತಬ್ರೇಸ್ ಭದ್ರಾವತಿ, ಶಶಿ ಮೈದೊಳ್, ನದಿಮ್ ಮದರಿ ಪಾಳ್ಯ, ಉಲ್ಲಾಸ್ ಹೂಸ ನಗರ, ಸುಭಾನ್ ಶಿಕಾರಿಪುರ, ಮಸ್ತಾನ್ , ಚೇತನ್, ಯುವರಾಜ್ , ಸಲ್ಮಾನ್, ಯುವ
ಕಾರ್ಯಕರ್ತರು ಭಾಗವಹಿಸಿದ್ದರು
..

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...