Thursday, May 8, 2025
Google search engine
Homeರಾಜ್ಯಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ ಕರೆದ ಗೃಹ ಸಚಿವ ಆರಗ...

ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ ಕರೆದ ಗೃಹ ಸಚಿವ ಆರಗ ಜ್ಞಾನೇಂದ್ರ..!!

ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕ ವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ, ಅಧಿಸೂಚನೆ ವಿರೋಧಿಸಿ, ಮಲೆನಾಡು ಪ್ರದೇಶ ವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು, ಇದೇ ದಿನಾಂಕ ಜುಲೈ ೧೮ ರಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಕರೆದಿದ್ದಾರೆ.

ಕಳೆದ ವಾರ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕರ್ನಾಟಕ ರಾಜ್ಯವೂ ಒಳಗೊಂಡಂತೆ ಒಟ್ಟು ೫೬೮೨೬ ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು, ಎರಡು ತಿಂಗಳು ಗಡುವು ನೀಡಲಾಗಿದೆ.

” ಒಂದು ವೇಳೆ ಈ ಅಧಿಸೂಚನೆ ಅನುಷ್ಠಾನ ಗೊಂಡರೆ, ಮಲೆನಾಡು ನಿವಾಸಿಗಳ ಬದುಕು ಮಸುಕಾಗುತ್ತದೆ, ಅಭಿವೃದ್ದಿ ಕುಂಟುತ್ತದೆ ಹಾಗೂ ತೀವ್ರ ಆರ್ಥಿಕ ಹಾನಿಗೆ
ತುತ್ತಾಗಬೇಕಾಗುತ್ತದೆ”.

ಕರ್ನಾಟಕ ಸರಕಾರ ಈ ಹಿಂದೆ Dr ಕಸ್ತೂರಿರಂಗನ್ ಸಮಿತಿ ವರದಿಯನ್ನು ತಿರಸ್ಕರಿಸಿದೆ ಹಾಗೂ ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿದೆ, ಆ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಈ ಭಾಗದ ಶಾಸಕರ ಆಗ್ರಹವಾಗಿದೆ, ಎಂದಿರುವ ಸಚಿವರು, ಸೋಮವಾರದ ಸಭೆಯಲ್ಲಿ, ಅಧಿಸೂಚನೆ ಯನ್ನು ವಿರೋಧಿಸಿ, ಗೊತ್ತುವಳಿಯನ್ನು ಮಂಡನೆ ಮಾಡಲಾಗುವುದು, ಎಂದೂ ತಿಳಿಸಿದ್ದಾರೆ.

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!