Friday, June 20, 2025
Google search engine
Homeರಾಜ್ಯಜಿಲ್ಲಾ ಉಸ್ತುವಾರಿ ಸಚಿವ ಡಾ// ಕೆ, ಸಿ ನಾರಾಯಣಗೌಡ ರಿಂದ ಮಳೆ ಸಂತ್ರಸ್ತ ಸ್ಥಳಗಳಿಗೆ...

ಜಿಲ್ಲಾ ಉಸ್ತುವಾರಿ ಸಚಿವ ಡಾ// ಕೆ, ಸಿ ನಾರಾಯಣಗೌಡ ರಿಂದ ಮಳೆ ಸಂತ್ರಸ್ತ ಸ್ಥಳಗಳಿಗೆ ಭೇಟಿ ಜಿಲ್ಲಾಧಿಕಾರಿಗಳಿಗೆ ಮಳೆಯಿಂದ ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಪರಿಹಾರಕ್ಕೆ ಸೂಚನೆ .!


ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳಯಿಂದ ಮನೆಹಾನಿ, ಬೆಳೆನಷ್ಟ ಹಾಗೂ ಜೀವಹಾನಿ ಮುಂತಾದವುಗಳಿಂದ ಸಂತ್ರಸ್ತರಾದ ಕುಟುಂಬಗಳಿಗೆ ತಕ್ಷಣದ ಕ್ರಮವಾಗಿ ನಿಗಧಿಪಡಿಸಿದ ಪರಿಹಾರಧನ ನೀಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು , ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ॥ ಕೆ.ಸಿ.ನಾರಾಯಣಗೌಡ ಅವರು ಹೇಳಿದರು.
ಅವರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ವಿವರ ನೀಡಿದರು.
ಈವರೆಗೆ ಜಿಲ್ಲೆಯಲ್ಲಿ ಸುಮಾರು 246 ಮನೆಗಳು ಬಾಗಶಃ ಹಾಗೂ 26 ಮನೆಗಳು ಸಂಪೂರ್ಣ ಕುಸಿದಿರುವ ಬಗ್ಗೆ ಮಾಹಿತಿ ಇದೆ. ಅಲ್ಲದೆ ಒರ್ವ ವ್ಯಕ್ತಿ ಮರಣ ಹೊಂದಿರುವ ಬಗ್ಗೆಯೂ ಮಾಹಿತಿ ಪಡೆಕೊಳ್ಳಲಾಗಿದ್ದು, ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಪರಿಹಾರಧನ ನೀಡುವಂತೆ ಸೂಚಿಸಲಾಗಿದ್ದು, ಪರಿಹಾರ ಕಾರ್ಯ ಪ್ರಗತಿಯಲ್ಲಿದೆ ಎಂದರು.


ಮಹಿಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಆಯಾ ತಾಲೂಕಿನ ಕಂದಾಯಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ತಕ್ಷಣದ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ತಲುಪಿಸುವಂತೆ ಸೂಚಿಸಿದರು.


ಶಿವಮೊಗ್ಗ ನಗರದ ಶೇಷಾದ್ರಿಪುರಂ, ಬಾಪೂಜಿ ನಗರಗಳಲ್ಲಿ ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಅವರು ಸಂತ್ರಸ್ತರಿಗೆ ತಕ್ಷಣದ ಪರಿಹಾರಧನವನ್ನು ಬಿಡುಗಡೆಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ॥ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಎಸ್.ಬಿ.ದೊಡ್ಡಗೌಡರ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ತಹಶಿಲ್ದಾರ್ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು…..

ರಘುರಾಜ್ ಹೆಚ್. ಕೆ….9449553305…..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!