Tuesday, May 6, 2025
Google search engine
Homeಶಿವಮೊಗ್ಗಶಿವಮೊಗ್ಗದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ (ರಿ) ಶಿವಮೊಗ್ಗ ಜಿಲ್ಲಾ ಸಮಿತಿಯಿಂದ ಬೃಹತ್‌ ಪ್ರತಿಭಟನೆ ..!!

ಶಿವಮೊಗ್ಗದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ (ರಿ) ಶಿವಮೊಗ್ಗ ಜಿಲ್ಲಾ ಸಮಿತಿಯಿಂದ ಬೃಹತ್‌ ಪ್ರತಿಭಟನೆ ..!!


ಶಿವಮೊಗ್ಗ : ಅಸಂಘಟಿತ ಕಾರ್ಮಿಕ -ಸಾಮಾಜಿಕ ಭದ್ರತಾ ಮಂಡಳಿ ಮುಖೇನ ಟೈಲರ್ಸ್ ವೃತ್ತಿ ಬಾಂಧವರ ಬೇಡಿಕೆಗಳ ಈಡೇರಿಕೆಗಾಗಿ ಬೃಹತ್‌ ಪ್ರತಿಭಟನಾ ಮೆರವಣಿಗೆ” ಎಂಬ ಫಲಕದೊಂದಿಗೆ ಮೆರವಣಿಗೆ ಹೊರಟಿತು.


ನಗರದ ಗೋಪಿ ವೃತ್ತದಿಂದ ಬೃಹತ್‌ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿಗಳ ಕಛೇರಿಯ ಎದುರು ಜಮಾವಣೆಗೊಂಡು ಪ್ರತಿಭಟನೆ ಮಾಡಿದರು..


ಪ್ರತಿಭಟನೆಯಲ್ಲಿ ಶಿವಮೊಗ್ಗದ ಮಾಜಿ ಶಾಸಕರಾದ ಪ್ರಸನ್ನ ಕುಮಾರ್ ಮಾತನಾಡಿ

,”ಇಂದು ಟೈಲರ್ ಗಳು ಇಲ್ಲವೆಂದರೆ ನಾವ್ಯಾರೂ ಹೊರಗೆ ಬರುವಂತಿಲ್ಲ. ನಮ್ಮ ಮಾನಕ್ಕೆ ಇವರುಗಳೇ ಕಾರಣ ಇವರುಗಳಿಲ್ಲದೆ ನಾವಿಲ್ಲ. ರಸ್ತೆಯಲ್ಲಿ ಹೋಗುವವನಿಗೂ ಇವರು ಬೇಕು ಮನೆಯಲ್ಲಿ ಇರುವವರಿಗೂ ಇವರುಗಳು ಬೇಕೆ ಬೇಕು. ಇಂತಹ ಟೈಲರ್ ಗಳಿಗೆ ಬೆಲೆಯೇರಿಕೆಯ ಬಿಸಿಯೊಂದಿಗಿನ ಕಷ್ಟಕರ ಜೀವನದಲ್ಲಿ ಸರ್ಕಾರಗಳು ಇವರೊಂದಿಗೆ ನಿಲ್ಲಬೇಕಿದೆ”. ಎಂದು ಹೇಳುತ್ತಾ “ಪಕ್ಷ ಜಾತಿ ಜನಾಂಗವಿಲ್ಲದೆ ಎಲ್ಲರೂ ಇವರನ್ನು ಬೆಂಬಲಿಸಬೇಕು” ಎಂದು ತಮ್ಮ ಬೆಂಬಲವನ್ನು ಸೂಚಿಸಿದರು.


ಈ ಪ್ರತಿಭಟನೆಯ ಮೆರವಣಿಗೆಯ ನೈತ್ರತ್ವವಹಿಸಿದ ಶಿವಮೊಗ್ಗ ಜಿಲ್ಲಾ ಮುಖಂಡರಾದ ಜೆ.ಎಸ್.ಸುಬ್ರಹ್ಮಣ್ಯ ನಿಯೋಜಿತ ಅಧ್ಯಕ್ಷರು. ಪಿ.ರವೀಂದ್ರ ಪ್ರಧಾನ ಕಾರ್ಯದರ್ಶಿಗಳು. ಶ್ರೀಯುತ ಚಂದ್ರಶೇಖರ್ ಉಪಾಧ್ಯಕ್ಷರು. ಶ್ರೀಧರ್ ಉಪಾಧ್ಯಕ್ಷರು ಭಾಗವಹಿಸಿ ಹಲವು ಬೇಡಿಕೆಗಳ ಬಗ್ಗೆ ಮಾಹಿತಿಗಳನ್ನು ಇನ್ನು ಹದಿನೈದು ದಿನಗಳಲ್ಲಿ ಇದಕ್ಕೆ ಸೂಕ್ತ ನ್ಯಾಯವನ್ನು ಒದಗಿಸಿಕೊಡಬೇಕೆಂದು ಇಲ್ಲವಾದಲ್ಲಿ ಮುಂದಿನ ತಿಂಗಳ ಒಳಗೆ ರಾಜ್ಯಾದ್ಯಂತ ತೀವ್ರತರವಾದ ಹೋರಾಟವನ್ನು ಕೈಗೊಳ್ಳುವುದಾಗಿ ಆಗ್ರಹಿಸಿ ಎಚ್ಚರಿಕೆ ನೀಡಿದರು.

ನಂತರ ಜಿಲ್ಲಾಧಿಕಾರಿಗಳ ಪರವಾಗಿ ಸ್ಥಳಕ್ಕೆ ಆಗಮಿಸಿದ ತಹಶಿಲ್ದಾರರಿಗೆ ಮನವಿಯನ್ನು ಅರ್ಪಿಸಿದರು.


ಮಳೆಯ ಆರ್ಭಟದ ನಡುವೆಯೂ ಲೆಕ್ಕಿಸದೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಪ್ರತಿಭಟನಾಕಾರರಲ್ಲಿ ಮಹಿಳೆಯರು ಹೆಚ್ಚಿನ ಪಾಲು ವಹಿಸಿದ್ದರು..

ಮಾಹಿತಿ: ಎ.ಮೖಕಲ್ ಕೆನಿತ್….

ರಘುರಾಜ್ ಹೆಚ್.ಕೆ..9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!