Saturday, June 14, 2025
Google search engine
Homeರಾಜ್ಯನೂತನ ಮುಖ್ಯಮಂತ್ರಿಗಳಿಗೆ ಶುಭಕೋರುದರ ಜೊತೆಗೆ,ಕ್ಷೇತ್ರದ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ...

ನೂತನ ಮುಖ್ಯಮಂತ್ರಿಗಳಿಗೆ ಶುಭಕೋರುದರ ಜೊತೆಗೆ,ಕ್ಷೇತ್ರದ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ!!

ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಬಸವರಾಜ್ ಬೊಮ್ಮಾಯಿ ಅವರಿಗೆ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಅವರು ಶುಭಕೋರಿದರು. ಇದೇ ಸಂದರ್ಭದಲ್ಲಿ ಶಾಸಕರು ಮಲೆನಾಡಿನ ಈಗಿನ ಸಮಸ್ಯೆಗಳ ಬಗ್ಗೆ ವಿವರವಾಗಿ ಚರ್ಚಿಸಿದರು.ಈ ಸಲ ಸುರಿದ ಮಳೆಯಿಂದಾಗಿ ಅಪಾರ ನಷ್ಟವುಂಟಾಗಿದೆ ಹಲವು ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ರೈತರು ಬೆಳೆದ ಬೆಳೆಗಳು ನಾಶವಾಗಿವೆ.ಗ್ರಾಮೀಣ ಪ್ರದೇಶದಲ್ಲಿ ಜನರ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಕೂಡಲೇ ಸರ್ಕಾರ ನೆರವಿಗೆ ಧಾವಿಸಬೇಕು ಕನಿಷ್ಠ 100ಕೋಟಿ ಆದರೂ ರಸ್ತೆ ಕಾಮಗಾರಿಗಳಿಗೆ ಪರಿಹಾರ ನಿಧಿಗೆ ಒದಗಿಸಬೇಕು. ಎಂದು ಮನವಿ ಮಾಡಿದರು. ಹಾಗೆ ಇದೆ ಸಂದರ್ಭದಲ್ಲಿ ಎನ್ ಡಿ ‌ಎಪ್ ಆರ್ ನಿಬಂಧನೆ ಪ್ರಕಾರ ಪರಿಹಾರ ನೀಡಿದರೆ ರೈತರಿಗೆ ಸಾಕಾಗುವುದಿಲ್ಲ. ಹಾಗಾಗಿ ಮಲೆನಾಡಿನ ರೈತರಿಗೆ ನಿಯಮಗಳನ್ನು ಸಡಿಲಗೊಳಿಸಿ ಪರಿಹಾರ ನೀಡಬೇಕು.ಎಂದು ಮನವಿ ಮಾಡಿದರು. ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿ ಇದಕ್ಕೆ ಸಂಬಂಧಪಟ್ಟಂತೆ ಸೂಕ್ತ ಪರಿಹಾರ ನೀಡಲಾಗುವುದು. ಹಾಗೆ ಅವಶ್ಯವಿದ್ದಲ್ಲಿ ತಾನೇ ಖುದ್ದು ಮಲ್ನಾಡು ಭಾಗಕ್ಕೆ ಬಂದು ಪರಿಶೀಲನೆ ನಡೆಸುವುದಾಗಿ ಶಾಸಕರಿಗೆ ಬರವಸೆ ನೀಡಿದ್ದಾರೆ. ಎಂದು ಶಾಸಕರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ…

ವರದಿ …ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!