Tuesday, June 10, 2025
Google search engine
Homeರಾಜ್ಯಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ರಾಷ್ಟ್ರ ಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟುವ ಉದ್ದೇಶದಿಂದ...

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ರಾಷ್ಟ್ರ ಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟುವ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪೋಲಿಸ್ ಠಾಣೆಗೆ ಮನವಿ..!!!

ಬೆಂಗಳೂರು : ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ ! ಆಗಸ್ಟ್ ೧೫ ಮತ್ತು ಜನವರಿ ೨೬ ರಂದು, ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ; ಆದರೆ ಅದೇ ದಿನ, ಅದೇ ಕಾಗದದ/ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ಧ್ವಜಗಳು ಬೇಗನೇ ನಾಶವಾಗುವುದಿಲ್ಲ, ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ.
ಹಾಗಾಗಿ ಸರಕಾರದ ಅಧಿನಿಯಮಗಳನ್ನು ಧಿಕ್ಕರಿಸಿ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವ ಮಾರಾಟಗಾರರು ಹಾಗೂ ಧ್ವಜ ಸಂಹಿತೆ ಪ್ರಕಾರ ಧ್ವಜವನ್ನು ಗೌರವಿಸದ ಜನರು, ಸಂಸ್ಥೆಗಳು ಮತ್ತು ಗುಂಪುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಬಸವೆಶ್ವರ ನಗರ ಪೊಲೀಸ್ ಠಾಣೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿಯನ್ನು ನೀಡಲಾಯಿತು.

ಈ ಸಂಧರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಸೌ.ಭವ್ಯ ಗೌಡ ಇವರು ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ‘ಧ್ವಜ ಎತ್ತರದಲ್ಲಿರಲಿ, ನಮ್ಮ ಧ್ವಜ ಎತ್ತರದಲ್ಲಿರಲಿ’(‘ಝಂಡಾ ಊಂಚಾ ರಹೆ ಹಮಾರಾ’) ಎಂದು ಹೆಮ್ಮೆಯಿಂದ ಹೇಳಲಾಗುತ್ತದೆ, ಆದರೆ ಇದೇ ವೇಳೆ ಚಿಕ್ಕ ಮಕ್ಕಳ ಹಠಮಾರಿತನದಿಂದ ಆಟವಾಡಲು ಅಥವಾ ವಾಹನಗಳಿಗೆ ಹಾಕಲು ಖರೀದಿಸಿದ ಪೇಪರ್, ಪ್ಲಾಸ್ಟಿಕ್ ಧ್ವಜಗಳು ರಸ್ತೆ, ಕಸದ ತೊಟ್ಟಿಗಳಲ್ಲಿ ಕಾಣಿಸಿಕೊಂಡು ಕಾಲ್ತುಳಿತಕ್ಕೆ ಒಳಗಾಗುತ್ತಿವೆ. ಕೆಲವರು ಮುಖಕ್ಕೆ ತ್ರಿವರ್ಣ ಧ್ವಜದಂತೆ ಬಣ್ಣ ಬಳಿದುಕೊಳ್ಳುತ್ತಾರೆ. ಇದರಿಂದಾಗಿ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜಕ್ಕೆ ಅಪಮಾನವಾಗುತ್ತಿದೆ. ಇದು ಈ ಧ್ವಜದ ಘನತೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಕ್ರಾಂತಿಕಾರಿಗಳ ಬಲಿದಾನಕ್ಕೆ ಮಾಡಿದ ಅಪಮಾನವಲ್ಲವೇ? ಆದ್ದರಿಂದ ರಾಷ್ಟ್ರಧ್ವಜಕ್ಕೆ ಆಗುವ ಇಂತಹ ಅಪಮಾನವನ್ನು ತಡೆಗಟ್ಟಲು ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವ ವಿರುದ್ಧ ಅಪರಾಧವನ್ನು ದಾಖಲಿಸಬೇಕೆಂದು ಮಾನ್ಯ ಪೊಲೀಸ್ ನಿರೀಕ್ಷಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭಾಜಪದ ಮುಖಂಡರಾದ ಶ್ರೀ.ಅನಿಲ್, ಹಿಂದೂ ಜನಜಾಗೃತಿ ಸಮಿತಿಯ ಸೌ.ಭವ್ಯ ಗೌಡ, ಶ್ರೀ.ನವೀನ್ ಗೌಡ, ಶ್ರೀ. ನಾರಾಯಣ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಮೋಹನ ಗೌಡ,
ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ,
ದೂ. ಕ್ರ. ೭೨೦೪೦೮೨೬೦೯…

ರಘುರಾಜ್ ಹೆಚ್.ಕೆ ‌..9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --! ದಾಖಲಾತಿಗಳಿಲ್ಲದ NOT FOR SALE ಔಷಧಿ ಮೆಗ್ಗಾನ್ ದಾಸ್ತಾನಿನಲ್ಲಿ ಪತ್ತೆ..! ಮುಂದುವರಿದ ಲೋಕಾಯುಕ್ತ ತನಿಖೆ..! ಕುವೆಂಪು ನಗರ ಬಡಾವಣೆಗೆ ಶಾಸಕ ಚೆನ್ನಬಸಪ್ಪ ಭೇಟಿ..! ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನ..! ಸರ್ಕಾರದ ವಿರುದ್ಧ ತಿರುಗಿಬಿದ್ದ ಮದ್ಯ ಮಾರಾಟಗಾರರು ಇಂದಿನಿಂದ ಪರ್ಮಿಟ್ ಚಳುವಳಿ..! 22ಕ್ಕೆ ಮದ್ಯ ಮಾರಾಟ ಬಂದ್...!...