Tuesday, May 6, 2025
Google search engine
Homeಶಿವಮೊಗ್ಗBig breaking : "ಸಿಮ್ಸ್" ನಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ನಡೆಯಿತಾ..?! ಮೊನ್ನೆ ನಡೆದ...

Big breaking : “ಸಿಮ್ಸ್” ನಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ನಡೆಯಿತಾ..?! ಮೊನ್ನೆ ನಡೆದ ಅಶ್ವಿನ್ ಹೆಬ್ಬಾರ್ ಪ್ರಕರಣ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಲೈಂಗಿಕ ಕಿರುಕುಳ..?! ಕಲಿಯಲು ಬಂದ ವಿದ್ಯಾರ್ಥಿನಿಗೆ (Staff Nurse ) ಶುಶ್ರೂಷಣಾದಿಕಾರಿ ಮಾಡಿದ್ದೇನು..?! ಇದು ನಿರ್ದೇಶಕರ ಗಮನಕ್ಕೆ ಬಂದಿಲ್ಲವೇ..?!ಅಸಲಿಗೆ ನಡೆದಿದ್ದೇನು..!!!!!

ಶಿವಮೊಗ್ಗ: ನಗರದ ಸಿಮ್ಸ್ ಕಾಲೇಜಿನ ಒಂದೊಂದೇ ಪ್ರಕರಣಗಳು ನಿಧಾನವಾಗಿ ಬೆಳಕಿಗೆ ಬರುತ್ತಿವೆ. ಮೊನ್ನೆ ಅಷ್ಟೇ ಉತ್ತರ ಭಾರತೀಯ ಮೂಲದ ವಿದ್ಯಾರ್ಥಿನಿ ಒಬ್ಬರಿಗೆ ಅಶ್ವಿನ್ ಹೆಬ್ಬಾರ್ ಎಂಬ ವೈದ್ಯರು ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಬಹುತೇಕ ಮುಚ್ಚಿ ಹಾಕಲಾಗಿತ್ತು. ಪತ್ರಿಕೆ ಆ ಪ್ರಕರಣವನ್ನು ಸಮಗ್ರವಾಗಿ ತನಿಕಾ ವರದಿ ಮಾಡಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳು ಅದನ್ನು ಮರುತನಿಕೆ ನಡೆಸಿ ಸರ್ಕಾರದ ಆದೇಶಕ್ಕೆ ಕಳುಹಿಸಿದ್ದರು . ನಂತರ ಸರ್ಕಾರದ ಕಾರ್ಯದರ್ಶಿಗಳು ಸಂಬಂಧ ಪಟ್ಟ ವೈದ್ಯರಿಗೆ ಅಮಾನತ್ತು ಆದೇಶ ನೀಡಿದ್ದರು. ಹೀಗೆ ಬಹುತೇಕ ಮುಚ್ಚಿ ಹೋಗಿದ್ದ ಲೈಂಗಿಕ ಕಿರುಕುಳ ಪ್ರಕರಣವನ್ನು ಪತ್ರಿಕೆ ಹೊರತಂದು ಆ ವೈದ್ಯರಿಗೆ ಅಮಾನತ್ತು ಆದೇಶ ಹೊರಡಿಸುವುದರಲ್ಲಿ ಪತ್ರಿಕೆ ಪ್ರಮುಖ ಪಾತ್ರ ವಹಿಸಿತ್ತು.ಈಗ ಮತ್ತೆ ಅಂತದ್ದೇ ಒಂದು ಪ್ರಕರಣ ಬಯಲಿಗೆ ಬಂದಿದೆ….

ಏನಿದು ಪ್ರಕರಣ :

ಸಿಮ್ಸ್ ಕಾಲೇಜಿನಲ್ಲಿ ಕಲಿಯಲು ಬಂದ ವಿದ್ಯಾರ್ಥಿನಿ ಜೊತೆಗೆ (Staff Nurse ) ಶುಶ್ರೂಷಣಾದಿಕಾರಿ ಅಸಭ್ಯವಾಗಿ ವರ್ತಿಸಿದ್ದು , ಲೈಂಗಿಕ ಕಿರುಕುಳ ನೀಡಿದ್ದಾರೆ. ಎನ್ನುವ ಆರೋಪಗಳು ಕಾಲೇಜಿನ ಕ್ಯಾಂಪಸ್ಸಿನ ತುಂಬಾ ಮೂರು ದಿನದಿಂದ ಹರಿದಾಡುತ್ತಿದೆ.

ಆಡಳಿತದ ವೈಫಲ್ಯ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆಯಾ…?

ಸಿಮ್ಸ್ ಕಾಲೇಜಿನ ವ್ಯಾಪ್ತಿಯಲ್ಲಿ ನಿರಂತರವಾಗಿ ಈ ತರದ ಪ್ರಕರಣಗಳು ನಡೆಯುತ್ತಿದ್ದು ಆಡಳಿತದ ವೈಫಲ್ಯ ಎದ್ದು ಕಾಣುತ್ತಿದೆ. ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಆಡಳಿತದ ಚುಕ್ಕಾಣಿ ಹಿಡಿದಿರುವ ನಿರ್ದೇಶಕರ ನಿರ್ಲಕ್ಷ ಇದಕ್ಕೆಲ್ಲ ನೇರ ಹೊಣೆ ಎನ್ನಬಹುದು. ಅಧಿಕಾರಿಗಳು ನಿರ್ದೇಶಕರ ಮಾತುಗಳನ್ನು ಪಾಲಿಸುತ್ತಿಲ್ಲ ಆಡಳಿತದ ವೈಫಲ್ಯ ಎದ್ದು ಕಾಣುತ್ತಿದೆ.

ಈಗ ನಡೆದಿರುವ ಪ್ರಕರಣವನ್ನು ಮುಚ್ಚಿ ಹಾಕದೆ ಸಮಗ್ರವಾಗಿ ತನಿಖೆ ನಡೆಸಿ ಸಂಬಂಧ ಪಟ್ಟವರಿಗೆ ಶಿಕ್ಷೆ ಆಗಬೇಕು :

ಈಗ ನಡೆದಿದೆ ಎನ್ನಲಾಗುತ್ತಿರುವ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ ಸಂಬಂಧಪಟ್ಟವರಿಗೆ ಶಿಕ್ಷೆ ಆಗಬೇಕು. ಮುಖ್ಯವಾಗಿ ನಿರ್ದೇಶಕರು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಮತ್ತೊಮ್ಮೆ ಜಿಲ್ಲಾಧಿಕಾರಿಗಳವರೆಗೆ ಹೋಗುವರೆಗೂ ನೋಡಿಕೊಳ್ಳಬಾರದು. ಇಲ್ಲವಾದಲ್ಲಿ ಪತ್ರಿಕೆ ಇದರ ವಿರುದ್ಧ ನಿರಂತರ ಹೋರಾಟ ನಡೆಸುತ್ತದೆ.

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!