Tuesday, May 6, 2025
Google search engine
Homeರಾಜ್ಯನಿರಂತರವಾಗಿ ಸುರಿಯುತ್ತಿರುವ ಮಳೆಯ ನಡುವೆಯೂ ತವರು ಕ್ಷೇತ್ರದಲ್ಲಿ ಅಭಿವೃದ್ದಿ ಯೋಜನೆ ಲೋಕಾರ್ಪಣೆ ಗೊಳಿಸಿದ ಗೃಹ ಸಚಿವ...

ನಿರಂತರವಾಗಿ ಸುರಿಯುತ್ತಿರುವ ಮಳೆಯ ನಡುವೆಯೂ ತವರು ಕ್ಷೇತ್ರದಲ್ಲಿ ಅಭಿವೃದ್ದಿ ಯೋಜನೆ ಲೋಕಾರ್ಪಣೆ ಗೊಳಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ..!!!!!

ತೀರ್ಥಹಳ್ಳಿ : ಕ್ಷೇತ್ರದ ಶಾಸಕರಾಗಿರುವ ಹಾಗೂ ರಾಜ್ಯದ ಗೃಹ ಸಚಿವರಾಗಿರುವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ, ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್ ಅನ್ನು, ಮಂಜೂರು ಮಾಡಿಸಿ, ಇಂದು, ಲೋಕಾರ್ಪಣೆ ಗೊಳಿಸಿದರು.

ಟವರ್ ಇಲ್ಲದ ಕಾರಣ ಸುಮಾರು ಏಳರಿಂದ ಎಂಟು ಕಿಮೀ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನತೆ ಎದುರಿಸುತ್ತಿದ್ದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರವಾಗಿದ್ದು, ಸಮಸ್ಯೆಗೆ ಪರಿಹಾರ ಒದಗಿಸಿದ ಸಚಿವರಿಗೆ, ಗ್ರಾಮಸ್ಥರು, ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ದೂರವಾಣಿ ಯ ಮೂಲಭೂತ ಸೌಕರ್ಯವನ್ನು ಒದಗಿಸುವುದರ ಮೂಲಕ, ಈ ಭಾಗದ ಜನತೆಗೆ ಅತ್ಯಗತ್ಯ ವಾದ ಸೌಲಭ್ಯ ದೊರಕಿದೆ ಹಾಗೂ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದು ಸಚಿವರು ತಿಳಿಸಿದರು.

ಕಳೆದ ನಾಲ್ಕು ವರ್ಷದಲ್ಲಿ, ನೆರಟುರು ಪಂಚಾಯ್ತಿ ವ್ಯಾಪ್ತಿಯಲ್ಲಿ ಸುಮಾರು 6.8 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮಂಜೂರಾಗಿದ್ದು, ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ.

ಈ ಮೂಲಕ ಗ್ರಾಮಸ್ಥರು ನಮ್ಮ ಮೇಲೆ ಇರಿಸಿದ ವಿಶ್ವಾಸಕ್ಕೆ ಋಣಿಯಾಗಿದ್ದೇನೆ ಹಾಗೂ ಅದನ್ನು ತೀರಿಸಲು ಬದ್ದನಾಗಿದ್ದೇನೆ ಎಂದು ಸಚಿವರು ತಿಳಿಸಿದರು.

ಇದೇ ಸಂದರ್ಭದಲ್ಲಿ, ಜಿಗಳಗೊಡು ಗ್ರಾಮದಲ್ಲಿ ಕುಡಿಯುವ ನೀರು ಪೂರೈಸುವ ಬೋರ್ವೆಲ್ ಅನ್ನೂ, ಇದೇ ಸಂದರ್ಭದಲ್ಲಿ, ಸೇವೆಗೆ ಅರ್ಪಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಸತೀಶ್, ಟಿಎಪಿಎಂಸಿ ಅಧ್ಯಕ್ಷ ನಾಗರಾಜ ಶೆಟ್ಟಿ, ಬಿಜೆಪಿ ನಾಯಕ ಸಿಬಿ ಈಶ್ವರ್ ಒಳಗೊಂಡಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!