
ಬೆಂಗಳೂರು : ಆಗಸ್ಟ್ 12ರಂದು ಬಸವ ಸಮಿತಿ ಸಭಾಂಗಣದಲ್ಲಿ ಹೃದಯವಾಹಿನಿ ಕರ್ನಾಟಕ ಮತ್ತು ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಅದಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಆಶ್ರಯದಲ್ಲಿ 15ನೇ ರಾಷ್ಟ್ರೀಯ ಕನ್ನಡ ಸಂಸ್ಕತಿ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಇದರ ಸಮಾರೋಪ ಸಮಾರಂಭದಲ್ಲಿ ಕೃಷಿ ಇಲಾಖೆಯ ಅಧಿಕಾರಿ ಡಾ. ನೂರ್ ಸಮದ್ ಅಬ್ಬಲಗೆರೆ ಶಿವಮೊಗ್ಗ ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ಕೀಟ ಪ್ರಪಂಚ ಅಂಕಣಕ್ಕೆ ಬರೆದ 100 ಅಂಕಣಗಳ “ವಿಸ್ಮಯ ಕೀಟ ಪ್ರಪಂಚ-೧” ಕೃತಿಯನ್ನು ಸಾರ್ವಜನಿಕ ಗ್ರಂಥಾಲಯಗಳ ನಿರ್ದೇಶಕ ಡಾ. ಸತೀಶ್ ಕುಮಾರ್ ಹೊಸಮನಿ ಲೋಕಾರ್ಪಣೆ ಮಾಡಿದರು. ವೇದಿಕೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ರಾದ ಡಾ ಅಶೋಕ್ ನರೋಡೆ, ಜನಪದ ಗಾಯಕ ಗೋ.ನಾ. ಸ್ವಾಮಿ, ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ ರಾಜ್, ಬಿ.ಬಿ.ಎಂ.ಪಿ. ಅಧಿಕಾರಿ ಮುರಳಿಧರ್ ಕೆ., ನಿವೃತ್ತ ಪೋಲೀಸ್ ಅಧಿಕಾರಿ ಶಂಕರ್ ಬಿದರಿ, ಹೃದಯವಾಹಿನಿ – ಕರ್ನಾಟಕ ಅಧ್ಯಕ್ಷ . ಕೆ.ಪಿ. ಮಂಜುನಾಥ್ ಸಾಗರ್, ಲೇಖಕ ಡಾ ನೂರ್ ಸಮದ್ ಅಬ್ಬಲಗೆರೆ, ಬಿ.ಬಿ.ಎಂ.ಪಿ. ವೈದ್ಯಾಧಿಕಾರಿ ಸವಿತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


2 comments
Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.
**mitolyn reviews**
Mitolyn is a carefully developed, plant-based formula created to help support metabolic efficiency and encourage healthy, lasting weight management.