
ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ:
ಶಿವಮೊಗ್ಗ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಸೇವಾ ಯೋಜನೆಯು ಕ್ರೀಡಾ ವಿಭಾಗದ ಸಹಯೋಗದಲ್ಲಿ ಭಾರತ ಸ್ವತಂತ್ರ್ಯ ಅಮೃತ ಮಹೋತ್ಸವವಙ್ನು ಸಂಭ್ರಮ, ಸಡಗರದಿಂದ ಆಚರಿಸಿತು.
ಕಾಲೇಜಿನ ಪ್ರಾಚಾರ್ಯರಾದ ಡಾ.ಎಚ್.ಎಸ್.ನಾಗಭೂಷಣ ಸ್ವಾತಂತ್ರ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷಗಳು ಸಂದಾಯವಾಗುತ್ತ ಬಂದರೂ ಕೋಮು, ದ್ವೇಷ, ಭ್ರಷ್ಟಾಚಾರಗಳಿಂದ ಹೊರಬರಲಾಗಲಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ದ್ಯೇಯೋದ್ಧೇಶಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ಯುವ ಪೀಳಿಗೆಯ ಮೇಲಿದೆ ಎಂದು ಹೇಳಿದರು.
ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿಗಳಾದ ಡಾ.ಬಾಲಕೃಷ್ಣ ಹೆಗಡೆ, ಐಕ್ಯೂಎಸಿ ಸಂಯೋಜಕ ಡಾ.ಎ.ಪಿ.ಓಂಕಾರಪ್ಪ, ಉಪನ್ಯಾಸಕರಾದ ಆರಡಿ ಮಲ್ಲಯ್ಯ, ದೀಪಿಕಾ ವಿ. ವಿದ್ಯಾಶ್ರೀ ಬಿ.ಕೆ. ಎನ್.ಡಿ.ರಮೇಶ ಮತ್ತಿತರರಿದ್ದರು…
ರಘುರಾಜ್ ಹೆಚ್ .ಕೆ …9449553305….