Home ರಾಜ್ಯಸಾಗರದ ಪ್ರಸಿದ್ಧ ಎಲ್ ಬಿ ಕಾಲೇಜಿನ ಆಡಳಿತ ಮಂಡಳಿಗೆ ಸರ್ಕಾರದಿಂದ ಆಡಳಿತ ಅಧಿಕಾರಿ ನೇಮಕ..!!!

ಸಾಗರದ ಪ್ರಸಿದ್ಧ ಎಲ್ ಬಿ ಕಾಲೇಜಿನ ಆಡಳಿತ ಮಂಡಳಿಗೆ ಸರ್ಕಾರದಿಂದ ಆಡಳಿತ ಅಧಿಕಾರಿ ನೇಮಕ..!!!

by EDITOR NEWS WARRIORS
0 comments

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿ ವಿವಾದ ತಾರಕಕ್ಕೇರಿತ್ತು. ಎರಡು ಗುಂಪುಗಳಾಗಿ ಶಿಕ್ಷಣ ಸಂಸ್ಥೆಯ ಆಡಳಿತ ನಡೆಸೋ ಸಂಬಂಧ ಜಟಾಪಟಿ ಕೂಡ ನಡೆದಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಆದೇಶಿಸಿದೆ.

ಈ ಸಂಬಂಧ ಶಿವಮೊಗ್ಗದ ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರು ಆದೇಶ ಹೊರಡಿಸಿದ್ದು, ದಿನಾಂಕ 17-03-2022ರಂದು ನಡೆದ 56ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಕ್ರಮಬದ್ಧವಾಗಿ ಜರುಗಿದ ಕುರಿತು ಹಾಗೂ ಸದರಿ ಸಭೆಯಲ್ಲಿ ರಚನೆಯಾಗಿದೆ ಎಂದು ಹೇಳಲಾದ ಎರಡು ಆಡಳಿತ ಮಂಡಳಿಗಳ ಪೈಕಿ ಯಾವ ಆಡಳಿತ ಮಂಡಳಿ ನೈಜವಾದದ್ದು ಎಂಬ ಬಗ್ಗೆ ಸಮರ್ಥನೀಯವಾದ ದಾಖಲಾತಿಗಳು ಇಲ್ಲ. ಹೀಗಾಗಿ ಆ ಎರಡು ಆಡಳಿತ ಮಂಡಳಿಯನ್ನು ರದ್ದುಗೊಳಿಸಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಶಿವಮೊಗ್ಗ ಉಪ ವಿಭಾಗ, ಶಿವಮೊಗ್ಗ ಅವರನ್ನು, ಕರ್ನಾಟಕ ಸಂಘಗಳ ನೋಂದಣಿ ಕಾಯಿದೆ 1960ರ ಕಲಂ 27(1)(ಸಿ) ರ ಪ್ರಕಾರ, ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲು ಶಿಫಾರಸ್ಸು ಮಾಡಿದೆ. ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸಂಸ್ಥೆಗೆ ಹೊಸದಾಗಿ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಚುನಾವಣೆಯನ್ನು ನಡೆಸಬಹುದಾಗಿ ಎಂಬುದಾಗಿ ಹೇಳಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ…

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...