
ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿರುವ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ನಿನ್ನೆ ಅಂದರೆ ಸೋಮವಾರ ಮುರುಘಾಮಠಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದು.
ಪೊಲೀಸರು ಇಂದೂ ಬಾಲಕಿಯರನ್ನು ಮಠಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಿದ್ದು, ಬಳಿಕ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಧೀಶರ ಮುಂದೆ ಹೇಳಿಕೆ ಕೊಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಸ್ಥಳ ಮಹಜರು ಇಂದು ಮಧ್ಯಾಹ್ನದವರೆಗೆ ಮುಂದುವರೆಯುವ ಸಾಧ್ಯತೆ ಇದ್ದು, ನಂತರ ಸಿಆರ್ ಪಿಸಿ 164 ಅಡಿ ಹೇಳಿಕೆ ಕೊಡಿಸಲು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಸಂತ್ರಸ್ತರು ಹೇಳಿಕೆ ನೀಡಿದ ನಂತರವೇ ಶಿವಮೂರ್ತಿ ಮುರುಘಾಶರಣರ ವಿಚಾರಣೆಗೆ ಒಳಪಡಿಸಲಾಗುತ್ತದೆ.
ಇದರ ಮಧ್ಯೆ ಮಹತ್ವದ ಬೆಳವಣಿಗೆ ಒಂದರಲ್ಲಿ ಮಾಜಿ ಶಾಸಕರ ವಿರುದ್ಧ ಕೌಂಟರ್ ಕೇಸ್ ಹಾಕಿರುವ ಮಾಹಿತಿಗಳು ಕೇಳಿ ಬರುತ್ತಿವೆ…?!!
ರಘುರಾಜ್ ಹೆಚ್.ಕೆ..9449553305…