Home ರಾಜ್ಯಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ..!!!!

ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ..!!!!

by EDITOR NEWS WARRIORS
1 comment

ಈ ಕುರಿತಂತೆ ರಾಜ್ಯ ಕಾರ್ಮಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳನ್ನು ಭದ್ರತಾ ಏಜೆನ್ಸಿ ಮುಖಾಂತರ ನೇಮಸಿಕೊಂಡಿದ್ದಲ್ಲಿ, ದಿನಾಂಕ 28-07-2022ರಲ್ಲಿ ನಿಗದಿಪಡಿಸಿರುವ ಕನಿಷ್ಠ ವೇತನ ದರಗಳನ್ನು ಪಾವತಿಸುವಂತೆ ಸೂಚಿಸಿದ್ದಾರೆ.


ಶೌಟಾಲಯಗಳು, ಸ್ನಾನಗೃಹಗಳು, ಒಳಚರಂಡಿಗಳನ್ನು ಶುಚಿ ಮಾಡುವ ಕೆಲಸಗಳಲ್ಲಿ ತೊಡಿರೋರಿಗೆ ಕನಿಷ್ಠ ವೇತನ ದರಗಳಂತೆ ಪಾವತಿಸುವಂತೆ ತಿಳಿಸಿದ್ದಾರೆ.

ಇದಲ್ಲದೇ ಪ್ರತಿ ವರ್ಷ ಏಪ್ರಿಲ್ ನಲ್ಲಿ ಏರಿಕಾಯಗುವ ವ್ಯತ್ಯಸ್ಥ ತುಟ್ಟಿಭತ್ಯೆ ದರಗಳನ್ನು ಸೇರಿಸಿ ಪಾವತಿಸಬೇಕು. ವಿರಾಮ ಒಳಗೊಂಡು ಒಂದು ದಿನಕ್ಕೆ ಎಂಟು ಘಂಟೆಗಳ ಕೆಲಸಕ್ಕಾಗಿ ಕನಿಷ್ಠ ವೇತನವಿದ್ದು, ಇದಕ್ಕಿಂತ ಹೆಚ್ಚು ಕೆಲಸ ಮಾಡಿದ್ರೇ, ದ್ವಿಗುಣ ದರದಲ್ಲಿ ವೇತನ ಲೆಕ್ಕಹಾಕಿ ನೀಡುವುದು ಎಂದಿದ್ದಾರೆ.


ಮಾಲೀಕರ ಭಾಗದ ಇಎಸ್‌ಐ, ಪಿಎಫ್ ವಂತಿಗೆ ಹಣವನ್ನು ನೌಕರರ ಭಾಗದ ಇಎಸ್‌ಐ, ಪಿಎಫ್ ವಂತಿಗೆಗೆ ಸೇರಿಸಿ, ಮಾಲೀಕರು ನೌಕರರ ಇಎಸ್‌ಐ, ಪಿಎಫ್ ಖಾತೆಗೆ ಜಮಾ ಮಾಡುವಂತೆ ತಿಳಿಸಿದ್ದಾರೆ.

ಇನ್ನೂ ಪ್ರತಿ ತಿಂಗಳು 5ನೇ ದಿನಾಂಕದೊಳಗೆ ನೌಕರರ ಬ್ಯಾಂಕ್ ಖಾತೆಗೆ ವೇತನದ ಹಣವನ್ನು ಜಮೆ ಮಾಡಬೇಕು. ಕ್ರಮಬದ್ಧವಲ್ಲದ ಯಾವುದೇ ಕಟಾವಣೆಗಳನ್ನು ಮಾಡಬಾರದು ಎಂದು ಹೇಳಿದೆ.


ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾಧ್ಯ ಹೆಚ್ ವೈ ಅವರು, ಸರಕಾರವು ಕಾರ್ಮಿಕರ ಸಮಸ್ಯೆಗಳನ್ನು ಅರಿತು ಇಂತಹ ಆದೇಶಗಳು ಬಂದಲ್ಲಿ ನೌಕರರಿಗೆ ಆತ್ಮಸ್ಥೈರ್ಯ ತುಂಬುತ್ತದೆ. ನಮ್ಮ ಸಂಘದ ಪ್ರಮುಖ ಬೇಡಿಕೆಯಾಗಿದೆ ಹೊರಗುತ್ತಿಗೆ ನೌಕರರಿಗೆ ಸರ್ಕಾರದ ಸ್ವಾಮ್ಯದ ಸಂಸ್ಥೆ ಅಥವಾ ಸಂಘವನ್ನು ಸ್ಥಾಪಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ...

ರಘುರಾಜ್ ಹೆಚ್.ಕೆ…9449553305…

Related Articles

1 comment

GeorgeZew July 21, 2025 - 10:02 am

Elevate your look at MenSpire Singapore—the best barber crafting precision styles in a chic, modern space. Expect top-tier service and sharp results every time.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...