Monday, June 16, 2025
Google search engine
Homeರಾಜ್ಯಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ..!!!!

ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ..!!!!

ಈ ಕುರಿತಂತೆ ರಾಜ್ಯ ಕಾರ್ಮಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳನ್ನು ಭದ್ರತಾ ಏಜೆನ್ಸಿ ಮುಖಾಂತರ ನೇಮಸಿಕೊಂಡಿದ್ದಲ್ಲಿ, ದಿನಾಂಕ 28-07-2022ರಲ್ಲಿ ನಿಗದಿಪಡಿಸಿರುವ ಕನಿಷ್ಠ ವೇತನ ದರಗಳನ್ನು ಪಾವತಿಸುವಂತೆ ಸೂಚಿಸಿದ್ದಾರೆ.


ಶೌಟಾಲಯಗಳು, ಸ್ನಾನಗೃಹಗಳು, ಒಳಚರಂಡಿಗಳನ್ನು ಶುಚಿ ಮಾಡುವ ಕೆಲಸಗಳಲ್ಲಿ ತೊಡಿರೋರಿಗೆ ಕನಿಷ್ಠ ವೇತನ ದರಗಳಂತೆ ಪಾವತಿಸುವಂತೆ ತಿಳಿಸಿದ್ದಾರೆ.

ಇದಲ್ಲದೇ ಪ್ರತಿ ವರ್ಷ ಏಪ್ರಿಲ್ ನಲ್ಲಿ ಏರಿಕಾಯಗುವ ವ್ಯತ್ಯಸ್ಥ ತುಟ್ಟಿಭತ್ಯೆ ದರಗಳನ್ನು ಸೇರಿಸಿ ಪಾವತಿಸಬೇಕು. ವಿರಾಮ ಒಳಗೊಂಡು ಒಂದು ದಿನಕ್ಕೆ ಎಂಟು ಘಂಟೆಗಳ ಕೆಲಸಕ್ಕಾಗಿ ಕನಿಷ್ಠ ವೇತನವಿದ್ದು, ಇದಕ್ಕಿಂತ ಹೆಚ್ಚು ಕೆಲಸ ಮಾಡಿದ್ರೇ, ದ್ವಿಗುಣ ದರದಲ್ಲಿ ವೇತನ ಲೆಕ್ಕಹಾಕಿ ನೀಡುವುದು ಎಂದಿದ್ದಾರೆ.


ಮಾಲೀಕರ ಭಾಗದ ಇಎಸ್‌ಐ, ಪಿಎಫ್ ವಂತಿಗೆ ಹಣವನ್ನು ನೌಕರರ ಭಾಗದ ಇಎಸ್‌ಐ, ಪಿಎಫ್ ವಂತಿಗೆಗೆ ಸೇರಿಸಿ, ಮಾಲೀಕರು ನೌಕರರ ಇಎಸ್‌ಐ, ಪಿಎಫ್ ಖಾತೆಗೆ ಜಮಾ ಮಾಡುವಂತೆ ತಿಳಿಸಿದ್ದಾರೆ.

ಇನ್ನೂ ಪ್ರತಿ ತಿಂಗಳು 5ನೇ ದಿನಾಂಕದೊಳಗೆ ನೌಕರರ ಬ್ಯಾಂಕ್ ಖಾತೆಗೆ ವೇತನದ ಹಣವನ್ನು ಜಮೆ ಮಾಡಬೇಕು. ಕ್ರಮಬದ್ಧವಲ್ಲದ ಯಾವುದೇ ಕಟಾವಣೆಗಳನ್ನು ಮಾಡಬಾರದು ಎಂದು ಹೇಳಿದೆ.


ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾಧ್ಯ ಹೆಚ್ ವೈ ಅವರು, ಸರಕಾರವು ಕಾರ್ಮಿಕರ ಸಮಸ್ಯೆಗಳನ್ನು ಅರಿತು ಇಂತಹ ಆದೇಶಗಳು ಬಂದಲ್ಲಿ ನೌಕರರಿಗೆ ಆತ್ಮಸ್ಥೈರ್ಯ ತುಂಬುತ್ತದೆ. ನಮ್ಮ ಸಂಘದ ಪ್ರಮುಖ ಬೇಡಿಕೆಯಾಗಿದೆ ಹೊರಗುತ್ತಿಗೆ ನೌಕರರಿಗೆ ಸರ್ಕಾರದ ಸ್ವಾಮ್ಯದ ಸಂಸ್ಥೆ ಅಥವಾ ಸಂಘವನ್ನು ಸ್ಥಾಪಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ...

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!