
ಬೆಂಗಳೂರು : ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ,ಕುಂದುಕೊರತೆಗಳ ಬಗ್ಗೆ, ರಚಿಸಲಾಗಿರುವ ಹಿತ ರಕ್ಷಣಾ ಸಮಿತಿಗೆ ನೂತನ ರಾಜ್ಯಾಧ್ಯಕ್ಷರಾಗಿ ಅರುಣ್ ಕುಮಾರ್ ಆರ್ ಬಿ (ಅರುಣ್ ಶಿವಮೊಗ್ಗ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದಿನಾಂಕ 24/7/2022 ರಂದು ಸಮಿತಿಯ ಗೌರವಾಧ್ಯಕ್ಷರು ಹಾಗೂ ಹಿರಿಯ ವಿಧಾನ ಪರಿಷತ್ತಿನ ಸದಸ್ಯರು ಆದಂತಹ ಆಯನೂರು ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಗೌರವ ಉಪಾಧ್ಯಕ್ಷರುಗಳು ಹಾಗೂ ವಿಧಾನ ಪರಿಷತ್ತಿನ ಸದಸ್ಯರುಗಳ ಸಹಮತದೊಂದಿಗೆ ಸಮಿತಿಯ ರಾಜ್ಯ ಕಾರ್ಯಧ್ಯಕ್ಷರಾದ ಸಿ ಕೆ ಪಾಟೀಲರು, ಮತ್ತು ವಿವಿಧ ಜಿಲ್ಲೆಗಳ ರಾಜ್ಯ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ…
ನೂತನವಾಗಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಯುತ ಅರುಣ್ ಕುಮಾರ್ ಅವರಿಗೆ ಒಳ್ಳೆದಾಗಲಿ ಎಂದು ನ್ಯೂಸ್ ವಾರಿಯರ್ಸ್ ಪತ್ರಿಕೆ ತಂಡ ಬಯಸುತ್ತದೆ…
ರಘುರಾಜ್ ಹೆಚ್.ಕೆ…9449553305…