Monday, June 16, 2025
Google search engine
Homeರಾಜ್ಯ""ಕೊಡಗಿನ ಮೊಟ್ಟೆ ಪ್ರಕರಣ"" ಪ್ರತಿಪಕ್ಷದ ನಾಯಕರಿಗೆ ಸೂಕ್ತ ರಕ್ಷಣೆ ನೀಡಲಾಗಿದೆ..!! ಕೊಡಗಿನ ಪ್ರಕರಣದ ಆಪಾದನೆ ನಿರಾಧಾರ...

“”ಕೊಡಗಿನ ಮೊಟ್ಟೆ ಪ್ರಕರಣ”” ಪ್ರತಿಪಕ್ಷದ ನಾಯಕರಿಗೆ ಸೂಕ್ತ ರಕ್ಷಣೆ ನೀಡಲಾಗಿದೆ..!! ಕೊಡಗಿನ ಪ್ರಕರಣದ ಆಪಾದನೆ ನಿರಾಧಾರ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ..!!!!

ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ವಿಧಾನ ಸಭೆಯಲ್ಲಿ, ಪ್ರಶ್ನೋತ್ತರ ವೇಳೆಯಲ್ಲಿ, ಸದಸ್ಯರು ಕೇಳಿದ ಪ್ರಶ್ನೆಗಳಿಗೆ, ಉತ್ತರಿಸಿದರು.

ಪ್ರತಿ ಪಕ್ಷ ನಾಯಕರಿಗೆ ಕೊಡಗಿನಲ್ಲಿ ರಕ್ಷಣೆ ನೀಡಿಲ್ಲ ಎಂಬ ಆಪಾದನೆ ನಿರಾಧಾರ: ಗೃಹ ಸಚಿವ ಆರಗ ಜ್ಞಾನೇಂದ್ರ.

ಬೆಂಗಳೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನವರು ಇತ್ತೀಚೆಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸರು ರಕ್ಷಣೆ ನೀಡಲು ವಿಫಲರಾಗಿದ್ದರು ಎಂಬ ಆಪಾದನೆಯಲ್ಲಿ ಹುರುಳಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿರುಗೇಟು ನೀಡಿದ್ದಾರೆ.

ವಿಧಾನ ಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನವರು ಮಾತನಾಡುತ್ತಾ, ಕೊಡಗು ಭೇಟಿ ಸಮಯದಲ್ಲಿ ನನ್ನ ಮೇಲೆ ಕೆಲವು ಕಿಡಿಗೇಡಿಗಳು ಮೊಟ್ಟೆ ಹಾಗೂ ಕಲ್ಲು ಎಸೆತ ನಡೆಸಿದರಲ್ಲದೆ, ಕಪ್ಪು ಬಾವುಟ ಸಹ ಪ್ರದರ್ಶಿಸಿದರು. ಆದರೆ ಸ್ಥಳದಲ್ಲಿದ್ದ ಪೋಲೀಸರು ಯಾವುದೇ ರಕ್ಷಣೆಗೆ ಮುಂದಾಗದೆ, ನಿಷ್ಕ್ರಿಯರಾಗಿದ್ದರು ಎಂದು ಆಪಾದಿಸಿದರು.

” ನಾನು ಕೊಡಗಿಗೆ ಮಳೆಯಿಂದಾಗಿ ಹಾನಿ ಗೊಳಗಾದ ಪ್ರದೇಶಗಳನ್ನು ವೀಕ್ಷಣೆ ಮಾಡಲು, ಕೊಡಗಿಗೆ ತೆರಳಿದ್ದೆ” ಎಂದು ಹೇಳಿದರು.

ಆದರೆ ಇದನ್ನು, ಬಲವಾಗಿ ನಿರಾಕರಿಸಿದ, ಗೃಹ ಸಚಿವರು, ಮೊಟ್ಟೆ ಎಸೆದ ಹಾಗೂ ಕಪ್ಪು ಬಾವುಟ ಪ್ರದರ್ಶಿಸಿ ದವರನ್ನು ಬಂಧಿಸಲಾಗಿದೆ ಹಾಗೂ ಕಾನೂನು ಕ್ರಮ ತೆಗೆದು ಕೊಳ್ಳಲಾಗಿದೆ, ಎಂದು ಮಾರುತ್ತರ ನೀಡಿದರು.

ಆ ಸಂಧರ್ಬದಲ್ಲಿ ಪೊಲೀಸರು ನಿಷ್ಕ್ರಿಯ ರಾಗಿರಲಿಲ್ಲ, ಹಾಗೂ ಸಿದ್ದರಾಮಯ್ಯ ನವರಿಗೆ, ಬೆಂಗಾವಾಗಿಲಿಗಿದ್ದು, ರಕ್ಷಣೆ ನೀಡಿದ್ದಾರೆ, ಎಂದೂ ಸಚಿವರು ಹೇಳಿದರು.

ರಘುರಾಜ್ ಹೆಚ್. ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!