Monday, June 16, 2025
Google search engine
Homeರಾಜ್ಯಎಲೆಚುಕ್ಕಿ ರೋಗ ಮತ್ತು ಕೊಳೆರೋಗದ ಸಮಸ್ಯೆಗೆ ಸೂಕ್ತ ಪರಿಹಾರ ಕೋರಿ ಬಿಜೆಪಿ ರೈತ ಮೋರ್ಚಾ ಶಿವಮೊಗ್ಗ..!!...

ಎಲೆಚುಕ್ಕಿ ರೋಗ ಮತ್ತು ಕೊಳೆರೋಗದ ಸಮಸ್ಯೆಗೆ ಸೂಕ್ತ ಪರಿಹಾರ ಕೋರಿ ಬಿಜೆಪಿ ರೈತ ಮೋರ್ಚಾ ಶಿವಮೊಗ್ಗ..!! ಬಿಜೆಪಿ ರೈತ ಮೋರ್ಚಾ ತೀರ್ಥಹಳ್ಳಿ..!! ಇವರಿಂದ ತೀರ್ಥಹಳ್ಳಿ ತಹಸಿಲ್ದಾರ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ..!!!

ಶಿವಮೊಗ್ಗ ಜಿಲ್ಲೆಯಾದ್ಯಂತ ಅತಿಯಾದ ಮಳೆಯಿಂದಾಗಿ ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ ಮತ್ತು ಕೊಳೆರೋಗ ಉಂಟಾಗಿದ್ದು ಅದರಲ್ಲೂ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಆಗುವ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಲ್ಲಿ ಈ ರೋಗದ ಬಾಧೆ ಹೆಚ್ಚಾಗಿದ್ದು. ರೈತರು ಕಂಗಾಲಾಗಿದ್ದಾರೆ. ಇದಲ್ಲದೆ ರೈತರು ಬೆಳೆದ ಬೆಳೆಗಳಾದ ಭತ್ತ,ಕಬ್ಬು, ಶುಂಠಿ ,ಜೋಳ, ಅತಿಯಾದ ಮಳೆಯಿಂದ ಹಾನಿಯಾಗಿದ್ದು ರೈತರ ಬದುಕು ಸಂಕಷ್ಟಕ್ಕೀಡಾಗಿದೆ. ಹೀಗಾಗಿ ಸಂಬಂಧಪಟ್ಟ ಇಲಾಖೆಗಳಾದ ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಕಂದಾಯ ಇಲಾಖೆಯ, ತಜ್ಞರುಗಳನ್ನು ಸಂಬಂಧಪಟ್ಟ ರೋಗಪೀಡತ ಪ್ರದೇಶಗಳಿಗೆ ಕಳಿಸಿಕೊಟ್ಟು ವರದಿಯನ್ನು ತರಿಸಿಕೊಂಡು ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು. ಹಾಗೂ ಸೂಕ್ತ ಪರಿಹಾರವನ್ನು ಒದಗಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ತಹಸಿಲ್ದಾರ್ ಮೂಲಕ ಘನ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ…

ಈ ಸಂದರ್ಭದಲ್ಲಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಸಾಲೇಕೊಪ್ಪ ರಾಮಚಂದ್ರ,ಮಂಡಲ ಅಧ್ಯಕ್ಷರಾದ ಬಾಳೆಬೈಲು ರಾಘವೇಂದ್ರ ,ಮಂಡಲ ಪ್ರಧಾನ ಕಾರ್ಯದರ್ಶಿ
ಕವಿರಾಜ್ ಬೇಗುವಳ್ಳಿ,
ರಕ್ಷಿತ್ ಮೇಗರವಳ್ಳಿ,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಹೆದ್ದೂರು,
ತಾ. ಪಂ. ಮಾಜಿ ಸದಸ್ಯರಾದ ಚಂದವಳ್ಳಿ ಸೋಮಶೇಖರ್ & ಕುಕ್ಕೆ ಪ್ರಶಾಂತ್ , ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ,ಹೆದ್ದೂರು ಮಹೇಶ್ , ದಿಂಡಿನಬೈಲು ನವೀನ್ , ಸುರೇಂದ್ರ ಕೋಟೆಗುಡ್ಡೆ , ಡಾಕಮ್ಮ, ಮುರುಳಿ ನಂಬಳ , ದಯಾನಂದ್ ಸಾಲಿಯಾನ್ , ಸತ್ಯೇಂದ್ರ ನಾಯಕ್, ಪ್ರದೀಪ್ ಗಬಡಿ , ಪದ್ಮ ನವೀನ್ ಮತ್ತಿತರರು ಉಪಸ್ಥಿತರಿದ್ದರು….

ರಘುರಾಜ್ ಹೆಚ್.ಕೆ….9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!