Monday, June 16, 2025
Google search engine
Homeರಾಜ್ಯ"ಆಶ್ರಯ ನಿವೇಶನ" ಗಳನ್ನು ರದ್ದುಗೊಳಿಸಿದ ಶಿವಮೊಗ್ಗ ಮಹಾನಗರ ಪಾಲಿಕೆ..!! ಕಾರಣವೇನು..?!

“ಆಶ್ರಯ ನಿವೇಶನ” ಗಳನ್ನು ರದ್ದುಗೊಳಿಸಿದ ಶಿವಮೊಗ್ಗ ಮಹಾನಗರ ಪಾಲಿಕೆ..!! ಕಾರಣವೇನು..?!



ಶಿವಮೊಗ್ಗ: ಮಹಾನಗರಪಾಲಿಕೆಯ ಆಶ್ರಯ ಯೋಜನೆಯಡಿ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ 1997 ನೇ ಸಾಲಿನಲ್ಲಿ ‘ಎ’ ಇಂದ ‘ಜಿ’ ಬ್ಲಾಕ್‍ವರೆಗೆ ನಿವೇಶನರಹಿತರಿಗೆ ನಿವೇಶನ ಹಂಚಲಾಗಿದ್ದು, ಫಲಾನುಭವಿಗಳು 20 ವರ್ಷಗಳಾದರೂ ಸಹ ಮನೆ ನಿರ್ಮಿಸಿಕೊಂಡು ವಾಸವಿರುವುದಿಲ್ಲ. ಆದ ಕಾರಣ ಆಶ್ರಯ ಸಮಿತಿ ಸಭೆ ನಡೆಸಿ, ಖಾಲಿ ಇರುವ ನಿವೇಶನಗಳ ಮಹಜರ್(ಸ್ಥಳ ಪರಿಶೀಲನಾ ವರದಿ) ಪಡೆದು, 543 ಖಾಲಿ ನಿವೇಶನಗಳನ್ನು ರದ್ದುಪಡಿಸಲಾಗಿರುತ್ತದೆ.


ಎ ಬ್ಲಾಕ್‍ನಲ್ಲಿರುವ ಒಟ್ಟು 44 ನಿವೇಶನಗಳು, ಬಿ ಬ್ಲಾಕ್‍ನಲ್ಲಿ 78, ಸಿ ಬ್ಲಾಕ್‍ನಲ್ಲಿ 97 ನಿವೇಶನಗಳು, ಡಿ ಬ್ಲಾಕ್‍ನಲ್ಲಿ 78, ಇ ಬ್ಲಾಕ್‍ನಲ್ಲಿ 51, ಎಫ್ ಬ್ಲಾಕ್‍ನಲ್ಲಿ 107 ಮತ್ತು ಜಿ ಬ್ಲಾಕ್‍ನಲ್ಲಿ 88 ಸೇರಿ ಒಟ್ಟು 543 ನಿವೇಶನಗಳು ಖಾಲಿ ಇರುತ್ತವೆ.
ನಿವೇಶನಗಳನ್ನು ಪಡೆದ ಫಲಾನುಭವಿಗಳು ನಿವೇಶನದಲ್ಲಿ ಮನೆ ನಿರ್ಮಾಣ ಮಾಡದೇ ಖಾಲಿ ಇರುವುದರಿಂದ ನಿವೇಶನದಾರರು ಹಕ್ಕುಪತ್ರದ ಹಿಂದೆ ಇರುವ ಷರತ್ತನ್ನು ಉಲ್ಲಂಘಿಸಿದ್ದು ಹಾಗೂ ತಮಗೆ ಮಂಜೂರಾಗಿರುವ ನಿವೇಶನಗಳಲ್ಲಿ ವಾಸಕ್ಕೆ ಹೋಗದೆ ತಾವುಗಳು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳದೆ ಇರುವುದು ಕಂಡು ಬಂದಿರುತ್ತದೆ. ಇಂತಹ ನಿವೇಶನಗಳ ಬಗ್ಗೆ ದಿನಾಂಕ: 25-05-2022 ರಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದು, ಬಂದಿದ್ದ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗಿರುತ್ತದೆ.

ದಿನಾಂಕ : 10-08-2022 ರ ಆಶ್ರಯ ಸಭೆಯ ವಿಷಯ ಸಂಖ್ಯೆ 7/1 ರಲ್ಲಿ ತೀರ್ಮಾನಿಸಿರುವಂತೆ ಮನೆ ನಿರ್ಮಿಸಿಕೊಳ್ಳದ ಒಟ್ಟು 543 ಖಾಲಿ ನಿವೇಶನಗಳನ್ನು ರದ್ದು ಮಾಡಲಾಗಿರುತ್ತದೆ ಎಂಬುದನ್ನು ಈ ಸಾರ್ವಜನಿಕ ಪ್ರಕಟಣೆ ಮೂಲಕ ತಿಳಿಯಪಡಿಸಿದೆ ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ…

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!