
ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದಂತಹ ವ್ಯಕ್ತಿತ್ವ ಹೊಂದಿದ್ದ ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪನವರು ಇತ್ತೀಚಿಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ಅಧಿಕೃತವಾಗಿ ನೇಮಕವಾಗಿದ್ದರು.
ಮಧು ಬಂಗಾರಪ್ಪನವರಿಗೆ ಅದ್ದೂರಿ ಸ್ವಾಗತ ನೀಡಿದ ಜಿಲ್ಲಾ ಕಾಂಗ್ರೆಸ್ :
ಇದರ ಅಂಗವಾಗಿ ಶಿವಮೊಗ್ಗ ನಗರದ ಹೆಬ್ಬಾಗಿಲು ಆದ ಹೊಳೆ ಬಸ್ಟಾಪ್ ಬೆಕ್ಕಿನ ಕಲ್ಮಠದ ಬಳಿ… ಬೃಹತ್ ಸೇಬಿನ ಹಾರ ಹಾಕುವ ಮೂಲಕ ಅವರನ್ನು ಸ್ವಾಗತಿಸಲಾಯಿತು… ಈ ಸಂದರ್ಭದಲ್ಲಿ ಕೆ ದೇವೇಂದ್ರಪ್ಪ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಗಳು… ಹಾಗೂ ಎಚ್ ಸಿ ಯೋಗೀಶ್ ಮಹಾನಗರಪಾಲಿಕೆ ಸದಸ್ಯರು ಮತ್ತು ಕಾಂಗ್ರೆಸ್ಸಿನ ಕಾರ್ಯಕರ್ತರು ಮಧು ಬಂಗಾರಪ್ಪ ಅಭಿಮಾನಿಗಳು ಮಧು ಬಂಗಾರಪ್ಪನವರಿಗೆ ಜೈಕಾರ ಹಾಕುದರ ಮುಖಾಂತರ ಅದ್ದೂರಿಯಾಗಿ ಬರಮಾಡಿಕೊಂಡರು…
ರಘುರಾಜ್ ಹೆಚ್.ಕೆ…9449553305….