
ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಿರ್ಮಾಣವಾಗಿರುವ ಕಳಪೆ ಹಾಗೂ ಅವೈಜ್ಞಾನಿಕ ಬಸ್ ನಿಲ್ದಾಣಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ನಾಗರಿಕ ಹಿತರಕ್ಷಣಾ ವೇದಿಕೆಯ ಸದಸ್ಯರು ಬಸ್ ನಿಲ್ದಾಣಗಳಲ್ಲಿ ಟಿವಿಗಳನ್ನು ಎಲ್ಲಿ ಅಳವಡಿಸಬೇಕು. ಬಸ್ ನಿಲ್ದಾಣಗಳಲ್ಲಿ ನಿಲ್ದಾಣಗಳಿಗೆ ತೆರಳಲು ಎಲ್ಲಿ ಜಾಗ ಬಿಡಬೇಕು. ಮಾಹಿತಿ ಫಲಕವನ್ನು ಎಲ್ಲಿ ಹಾಕಬೇಕು. ಎನ್ನುವ ಸಾಮಾನ್ಯ ಅರಿವು ಇಲ್ಲದ ಇಂಜಿನಿಯರ್ ಗಳ ಕೆಲಸದಿಂದ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕತೆಯಿಂದ ಕೂಡಿದ್ದು ಇಲ್ಲಿ ಹಣವನ್ನು ದುಂದು ವೆಚ್ಚ ಮಾಡಲಾಗಿದೆ. ಇದರ ಸಂಪೂರ್ಣ ಜವಾಬ್ದಾರಿ ಕಾರ್ಯಪಾಲಕ ಇಂಜಿನಿಯರ್ ವಿಜಯಕುಮಾರ್ ಹಾಗೂ ಎಂ,ಡಿ ವಠಾರೆ ಅವರದ್ದು ಅವರನ್ನು ಕೂಡಲೇ ಅಮಾನತುಗೊಳಿಸಬೇಕು. ಇಲ್ಲವಾದಲ್ಲಿ ಬರುವ ಅಕ್ಟೋಬರ್ 2 ರ ಗಾಂಧಿ ಜಯಂತಿ ಅಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರಘುರಾಜ್ ಹೆಚ್. ಕೆ…9449553305….