Tuesday, June 17, 2025
Google search engine
Homeರಾಜ್ಯಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ‘ಒಂದು ದಿನದ ಯುವ ಕ್ರೀಡಾಧಿಕಾರಿ’..!!

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ‘ಒಂದು ದಿನದ ಯುವ ಕ್ರೀಡಾಧಿಕಾರಿ’..!!



ಶಿವಮೊಗ್ಗ::ಅ.11 ರ ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪ್ರಯುಕ್ತ ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಕು. ಶಾಲಿನಿ.ಎಸ್ ರವರು ‘ಒಂದು ದಿನದ ಯುವ ಕ್ರೀಡಾಧಿಕಾರಿ’ಯಾಗಿ ಆಯ್ಕೆಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಹಾಯಕ ನಿರ್ದೇಶಕರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸಿದರು.
ರಾಜ್ಯ ಸರ್ಕಾರ ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪ್ರಯುಕ್ತ 18 ರಿಂದ 23 ವಯೋಮಿತಿಯ ಯುವತಿಯರಿಗೆ ‘ಒಂದು ದಿನದ ಯುವ ಕ್ರೀಡಾಧಿಕಾರಿ’ಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ಆನ್‍ಲೈನ್ ಅರ್ಜಿ ಕರೆದಿದ್ದು ಅದರಂತೆ ಅರ್ಜಿ ಸಲ್ಲಿಸಿ, ಆಯ್ಕೆಯಾದ ಶಾಲಿನಿ.ಎಸ್ ನೆಹರೂ ಕ್ರೀಡಾಂಗಣದ ಮುಖ್ಯದ್ವಾರದಲ್ಲಿರುವ ಕ್ರೀಡಾ ಇಲಾಖೆಯಲ್ಲಿ ಅ.11 ರಂದು ಒಂದು ದಿನದ ಯುವ ಕ್ರೀಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.


ಸಹಾಯಕ ನಿರ್ದೇಶಕರ ಬಳಿ ಇಲಾಖೆಯ ಕಾರ್ಯವೈಖರಿ, ಕ್ರೀಡಾ ಚಟುವಟಿಕೆ ವಿಭಾಗ, ಕಾರ್ಯಕ್ರಮಗಳು, ಅದರ ಸಂಘಟನೆ, ಅನುದಾನ, ಒಳಾಂಗಣ, ಹೊರಾಂಗಣ ಕ್ರೀಡಾಂಗಣಗಳಲ್ಲಿನ ಸೌಕರ್ಯಗಳು, ನಿರ್ವಹಣೆ, ವ್ಯಾಯಾಮಶಾಲೆ, ಕ್ರೀಡಾ ಸಂಕೀರ್ಣದಲ್ಲಿನ ಈಜುಕೊಳ, ಟೆನಿಸ್ ಅಂಕಣ, ಸ್ಕೇಟಿಂಗ್ ಅಂಕಣ, ಕ್ರೀಡಾಂಗಣ ಸದಸ್ಯತ್ವ ಶುಲ್ಕ, ಸಿಬ್ಬಂದಿ ವಿವರ ಕುರಿತು ಹಾಗೂ ಜಿಲ್ಲಾ ಕ್ರೀಡಾಶಾಲೆ/ವಸತಿ ನಿಲಯದದ ಕುರಿತು ಸವಿಸ್ತಾರವಾಗಿ ತಿಳಿದುಕೊಂಡರು. ನಂತರ ಜಿಲ್ಲಾ ಮಟ್ಟದ ವಾಲಿಬಾಲ್, ವಿಭಾಗ ಮಟ್ಟದ ಫುಟ್‍ಬಾಲ್ ಹಾಗೂ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜಿನ ಕರಾಟೆ ಕ್ರೀಡಾಕೂಟದಲ್ಲಿ ಭಾಗವಹಿಸಿದರು. ಹಾಗೂ ಇಲಾಖೆ ಕುರಿತಾದ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು ಯುವ ಕ್ರೀಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಸಂತಸ ವ್ಯಕ್ತಪಡಿಸಿದರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ತಿಳಿಸಿದ್ದಾರೆ.

ರಘುರಾಜ್ ಹೆಚ್‌.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!