Thursday, May 1, 2025
Google search engine
Homeರಾಜ್ಯಅಣ್ಣನ ಮಗನ ಹುಡುಕಾಟದಲ್ಲಿ ಶಾಸಕ ರೇಣುಕಾಚಾರ್ಯ..!! ಮಗನಿಗಾಗಿ ಕಣ್ಣೀರು ಹಾಕಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ..!!!

ಅಣ್ಣನ ಮಗನ ಹುಡುಕಾಟದಲ್ಲಿ ಶಾಸಕ ರೇಣುಕಾಚಾರ್ಯ..!! ಮಗನಿಗಾಗಿ ಕಣ್ಣೀರು ಹಾಕಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ..!!!

ಹೊನ್ನಾಳಿ: ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ನಾಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ.

ರೇಣುಕಾಚಾರ್ಯ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ ಕಾಣೆಯಾಗಿದ್ದಾರೆ. ಇದರಿಂದ ಇಡೀ ಕುಟುಂಬಕ್ಕೆ ಆಘಾತವಾಗಿದ್ದು, ಅಣ್ಣನ ಮಗನ ಹುಡುಕಾಟದಲ್ಲಿ ಶಾಸಕ ರೇಣುಕಾಚಾರ್ಯ ಇದ್ದಾರೆ. ಕಳೆದ ಭಾನುವಾರ ಗೌರಿಗದ್ದೆಗೆ ಕಾರಿನಲ್ಲಿ ತೆರಳಿದ್ದ ಚಂದ್ರಶೇಖರ್ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದರು. ನಂತರ ಚಂದ್ರು, ಶಿವಮೊಗ್ಗದಲ್ಲಿ ಸ್ನೇಹಿತರನ್ನು ಮಾತನಾಡಿಸಿ ಸ್ವಲ್ಪ ಕಾಲ ಅವರ ಜೊತೆ ಕಾಲ ಕಳೆದು ಹೊನ್ನಾಳಿಗೆ ಹಿಂದಿರುಗಿದ್ದರು.

ತಮ್ಮ ಸ್ನೇಹಿತ ಕಿರಣ್ ಎಂಬುವರ ಜೊತೆ ತೆರಳಿದ್ದ ಚಂದ್ರು ಶಿವಮೊಗ್ಗದಿಂದ ವಾಪಸ್ ಆಗಿ ನ್ಯಾಮತಿವರೆಗೂ ಬಂದಿದ್ದಾರೆ. ಆನಂತರ ನಾಪತ್ತೆಯಾಗಿದ್ದಾರೆ. ಚಂದ್ರು ಪ್ರಯಾಣಿಸುತ್ತಿದ್ದ ಕಾರು ಶಿವಮೊಗ್ಗದ ಮೂಲಕ ಹಾದು ಹೋಗುವ ದೃಶ್ಯಗಳು ಪತ್ತೆಯಾಗಿವೆ, ಭಾನುವಾರ ರಾತ್ರಿ ೧೧.೫೬ ರ ಸುಮಾರಿಗೆ ಚಂದ್ರಶೇಖರ್ ಮೆಬೈಲ್ ಆನ್ ನಲ್ಲಿತ್ತು, ಆದರೆ ಬೆಳದ್ದೆ ೬.೪೮ ಕ್ಕೆ ಸ್ವಿಚ್ ಆಫ್ ಆಗಿದೆ, ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಕೂಡ ನಾಪತ್ತೆಯಾಗಿದ್ದು, ಕಿಡ್ನಾಪ್ ಆಗಿರುವ ಅನುಮಾನ ಮೂಡುತ್ತಿದೆ.

ತಮ್ಮ ಸಹೋದರನ ಪುತ್ರ ನಾಪತ್ತೆಯಾಗಿರುವ ಸಂಬಂಧ ಮಾತನಾಡಿರುವ ರೇಣುಕಾಚಾರ್ಯ, ಮಗನನ್ನು ಹುಡುಕಿಕೊಡುವಂತೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡುತ್ತಲೇ ರೇಣುಕಾಚಾರ್ಯ ಕಣ್ಣೀರು ಹಾಕಿದರು. ಪುತ್ರ ಚಂದ್ರಶೇಖರ್ ತುಂಬಾ ಸೌಮ್ಯ ಸ್ವಭಾವದವನು. ಆತನ ಮೊಬೈಲ್ ಸಹ ಸ್ವಿಚ್ಛ್ ಆಫ್ ಆಗಿದೆ. ಆತನ ಕಾರ್ ಸಹ ಪತ್ತೆಯಾಗಿಲ್ಲ , ನನ್ನ ಅಣ್ಣ ರಮೇಶ್‌ನನ್ನು ಸಮಾಧಾನ ಪಡಿಸಲು ಆಗುತ್ತಿಲ್ಲ, ಎಲ್ಲಿದ್ದರೂ ಬೇಗ ಮನೆಗೆ ಬಾ ಮಗನೆ ಎಂದು ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಚಂದ್ರಶೇಖರ್ ಇಶಾ ಫೌಂಡೇಶನ್ ಮತ್ತು ಗೌರಿಗದ್ದೆ ವಿನಯ್ ಗುರೂಜಿ ಅವರ ಅನುಯಾಯಿಯಾಗಿದ್ದರು. ಚಂದ್ರ ಶೇಖರ್ ಕ್ಷೇತ್ರದ ಜನರ ಜೊತೆ ಉತ್ತಮ ಒಡನಾಟ ವಿಟ್ಟುಕೊಂಡಿದ್ದರು, ವಿಧಾನಸಭೆ ಚುನಾವಣೆ ಸಮೀಪಸುತ್ತಿರುವ ಸಮಯದಲ್ಲಿ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಎಸ್‌ಪಿ, ಡಿವೈಎಸ್‌ಪಿ ಮಾರ್ಗದಶರ್ನದಲ್ಲಿ ಮೂರು ತಂಡಗಳನ್ನು ರಚಿಸಿ ಹುಡುಕಾಟ ನಡೆಸುತ್ತಿದ್ದೇವೆ. ಲಭ್ಯವಿರುವ ಸಿ.ಸಿ.ಟಿವಿ ಕ್ಯಾಮೆರಾ ದೃಶ್ಯಾವಳಿಗಳು, ಟೋಲ್ ಗೇಟ್‌ಗಳಲ್ಲಿ ಪರಿಶೀಲನೆ ನಡಸಲಾಗುತ್ತಿದೆ ಎಂದು ಸಿಪಿಐ ಸಿದ್ದೇಗೌಡ ತಿಳಿಸಿದ್ದಾರೆ.

ಶಿವಮೊಗ್ಗ -ದಾವಣಗೆರೆ ಚಿತ್ರದುರ್ಗ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಇನ್ನು ತಮ್ಮ ನಾಯಕನಿಗೆ ಸಮಾಧಾನ ಮಾಡಲು ಎಂಪಿ ರೇಣುಕಾಚಾರ್ಯರ ನಿವಾಸಕ್ಕೆ ಅಪಾರ ಸಂಖ್ಯೆಯ ಕಾರ್ಯಕರ್ತರು ಅಭಿಮಾನಿಗಳು ಆಗಮಿಸುತ್ತಿದ್ದು, ಕೆಎ ೧೭ ಎಂಎ ೨೫೩೪ ನಂಬರಿನ ಕ್ರೇಟಾ ಕಾರು, ಚಂದ್ರಶೇಖರ್ ಮೊಬೈಲ್ ಸಂಖ್ಯೆ ೮೭೯೨೬೬೭೬೯೧ ಇದಾಗಿದ್ದು ಇದುವರೆಗು ಸ್ವಿಚ್ ಆಫ್ ಆಗಿದೆ.

ಓಂಕಾರ ಎಸ್. ವಿ. ತಾಳಗುಪ್ಪ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...