Wednesday, April 30, 2025
Google search engine
Homeರಾಜ್ಯಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಖಡಕ್ ಕಾರ್ಯಾಚರಣೆ..!! ಶಾಲಾ ಕಾಲೇಜುಗಳ ಆವರಣದಲ್ಲಿ ತಂಬಾಕು ಉತ್ಪನ್ನ ಮಾರಾಟ...

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಖಡಕ್ ಕಾರ್ಯಾಚರಣೆ..!! ಶಾಲಾ ಕಾಲೇಜುಗಳ ಆವರಣದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿಗಳು ಬೇಕರಿಗಳ ಮೇಲೆ ಹಾಗೂ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದವರ ಮೇಲೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕೇಸ್ ದಾಖಲು…!!!

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಆದೇಶದ ಮೇರೆಗೆ ಇಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳ ಆವರಣದಿಂದ 100 ಗಜಗಳ ವ್ಯಾಪ್ತಿಯಲ್ಲಿ ಕಾನೂನು ಬಾಹೀರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಪೆಟ್ಟಿಗೆ ಅಂಗಡಿ, ಜೆರಾಕ್ಸ್ ಅಂಗಡಿ ಮತ್ತು ಬೇಕರಿಗಳ ಮೇಲೆ ಮತ್ತು ಸಾರ್ವಜನಿಕವಾಗಿ ಉಪಟಳ (Public Nuisance) ನೀಡುತ್ತಿದ್ದವರ ಮೇಲೆ ಮಧ್ಯಾಹ್ನದಿಂದ ಸಂಜೆಯವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿದ್ದಾರೆ…

ಶಿವಮೊಗ್ಗ ಉಪ ವಿಭಾಗದ 21 ಶಾಲಾ ಕಾಲೇಜುಗಳ ಹತ್ತಿರ 186 ಕೋಟ್ಪಾ ಪ್ರಕರಣಗಳು ಮತ್ತು 68 ಲಘು ಪ್ರಕರಣಗಳನ್ನು…

ಶಿಕಾರಿಪುರ ಉಪ ವಿಭಾಗದ 25 ಶಾಲಾ ಕಾಲೇಜುಗಳ ಹತ್ತಿರ 74 ಕೋಟ್ಪಾ ಪ್ರಕರಣಗಳು ಮತ್ತು 106 ಲಘು ಪ್ರಕರಣಗಳು,

ಸಾಗರ ಉಪ ವಿಭಾಗದ 10 ಶಾಲಾ ಕಾಲೇಜುಗಳ ಹತ್ತಿರ 51 ಕೋಟ್ಪಾ ಪ್ರಕರಣಗಳು ಮತ್ತು 49 ಲಘು ಪ್ರಕರಣಗಳು,

ಭದ್ರಾವತಿ ಉಪ ವಿಭಾಗದ 7 ಶಾಲಾ ಕಾಲೇಜುಗಳ ಹತ್ತಿರ 19 ಕೋಟ್ಪಾ ಪ್ರಕರಣಗಳು ಮತ್ತು 21 ಲಘು ಪ್ರಕರಣಗಳು,

ತೀರ್ಥಹಳ್ಳಿ ಉಪ ವಿಭಾಗದ 12 ಶಾಲಾ ಕಾಲೇಜುಗಳ ಹತ್ತಿರ 94 ಕೋಟ್ಪಾ ಪ್ರಕರಣಗಳು ಮತ್ತು 160 ಲಘು ಪ್ರಕರಣಗಳು ಸೇರಿ ಒಟ್ಟು 75 ಶಾಲಾ ಕಾಲೇಜುಗಳ ಹತ್ತಿರ ಒಟ್ಟು 424 ಕೋಟ್ಪಾ ಪ್ರಕರಣಗಳು ಮತ್ತು 404 ಲಘು ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ…

ಇದು ಹೀಗೆ ಮುಂದುವರೆದುಕೊಂಡು ಹೋಗಬೇಕು….

ರಘುರಾಜ್ ಹೆಚ್.ಕೆ..9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...