Wednesday, April 30, 2025
Google search engine
Homeರಾಜ್ಯTHIRTHALLI BREAKING:: 2022 ನೇ ಸಾಲಿನಲ್ಲಿ ಅತೀವೃಷ್ಟಿಯ ಹೆಸರಿನಲ್ಲಿ ಅನರ್ಹ ಫಲಾನುಭವಿಗಳಿಗೆ ಮನೆ ಮಂಜೂರು...

THIRTHALLI BREAKING:: 2022 ನೇ ಸಾಲಿನಲ್ಲಿ ಅತೀವೃಷ್ಟಿಯ ಹೆಸರಿನಲ್ಲಿ ಅನರ್ಹ ಫಲಾನುಭವಿಗಳಿಗೆ ಮನೆ ಮಂಜೂರು ಹಾಗೂ ಪರಿಹಾರ..?! ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯ ಹಣ ದುರುಪಯೋಗ ತ್ತಿದೆಯಾ..?!! ಜಿಲ್ಲಾಧಿಕಾರಿಗಳ ಮರೆಹೋದ ಸಾಲೂರು ಗ್ರಾಮಸ್ಥರು..!!!

ಶಿವಮೊಗ್ಗ : ಅಧಿಕ ಮಳೆ ಬಂದು ಅತಿವೃಷ್ಟಿ ಆದ ಪರಿಣಾಮ ಮನೆಗಳು ಬೀಳುವುದರಿಂದ ಆಗುವ ನಷ್ಟವನ್ನು ಪರಿಹಾರ ಮಾಡುವ ಉದ್ದೇಶದಿಂದ ಸರ್ಕಾರ ಅಂತಹ ನೊಂದ ಫಲಾನುಭವಿಗಳಿಗೆ ಹಣದ ರೂಪದಲ್ಲಿ ಪರಿಹಾರವನ್ನು ಘೋಷಿಸಿದೆ… ಹಾಗೂ ಮನೆ ಮಂಜೂರು ಮಾಡಿದೆ…

ಆದರೆ ಅದರ ದುರುಪಯೋಗ ಈಗ ನಡೆಯುತ್ತಿದೆ ನಿಜವಾದ ಫಲಾನುಭವಿಗಳಿಗೆ ಬಿಟ್ಟು ಆರ್ಥಿಕವಾಗಿ ಸದೃಢವಾಗಿರುವ ವಾಸಕ್ಕೆ ಮನೆ ಇರುವ ನಿವಾಸಿಗಳು ಕೂಡ ಫಲಾನುಭವಿಗಳು ಆಗಿರುವುದು ದುರಂತವಾಗಿದೆ…

ಮೊದಲಿಗೆ ತಾತ್ಕಾಲಿಕ ಶೆಡ್ ರೂಪಿಸಿ ಮಳೆ ಬಂದ ನಂತರ ಅದನ್ನು ಬೀಳಿಸಿ, ಇಲ್ಲವೇ ಚೂರು ಪಾರು ಬಿದ್ದು ಹೋದ ಮನೆಯನ್ನು ಪೂರ್ತಿ ಬಿಳಿಸಿ ಪರಿಹಾರ ತೆಗೆದುಕೊಂಡ ಸಾಕಷ್ಟು ಉದಾಹರಣೆಗಳು ಇವೆ…

ಸಮಗ್ರವಾಗಿ ಸ್ಥಳ ಪರಿಶೀಲನೆ ನಡೆಸದೆ ವಿ ಎ, ಪಿ ಡಿ ಓ ,ಎಂಜಿನಿಯರ್ ಗಳು ರಿಪೋರ್ಟ್ ಹಾಕಿ ಅರ್ಹ ಫಲಾನುಭವಿಗಳನ್ನು ಬಿಟ್ಟು ಅನರ್ಹ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಿಸಿದ್ದಾರೆ ಹಾಗೂ ಪರಿಹಾರ ಕೊಡಿಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ ಇಂದು ಜಿಲ್ಲಾಧಿಕಾರಿಗಳಿಗೆ ತೀರ್ಥಹಳ್ಳಿ ತಾಲೂಕಿನ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ದೂರು ನೀಡಿದ್ದಾರೆ…

ಪತ್ರಿಕೆಗೆ ಇರುವ ಮಾಹಿತಿಯ ಪ್ರಕಾರ ಇದು ಕೇವಲ ತೀರ್ಥಹಳ್ಳಿ ತಾಲೂಕಿನ ಸಾಲೂರು ಗ್ರಾಮದ ಸಮಸ್ಯೆ ಅಷ್ಟೇ ಅಲ್ಲ ಇಡೀ ಜಿಲ್ಲೆಯ ಹಲವು ಕಡೆ ಇದೇ ತರಹ ಮೋಸ ನಡೆದಿದೆ ಎನ್ನಲಾಗಿದೆ…

ದೂರು ಇರುವ ಕಡೆ ಇದರ ಸಮಗ್ರ ತನಿಖೆ ಆಗಬೇಕು ಮತ್ತೊಮ್ಮೆ ಸ್ಥಳ ಪರಿಶೀಲನೆ ಮಾಡಿ ನಿಜವಾದ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಬೇಕು ಹಾಗೂ ಪರಿಹಾರ ನೀಡಬೇಕು ಇಲ್ಲವಾದಲ್ಲಿ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಯ ಹಣ ಉಳ್ಳವರ ಪಾಲಾಗುತ್ತದೆ.

ಶಿವಮೊಗ್ಗದ ಜಿಲ್ಲಾಧಿಕಾರಿಗಳು ಇದನ್ನು ಗಂಭೀರವಾಗಿ ತೆಗೆದುಕೊಂಡು ಸಂಬಂಧ ಪಟ್ಟ ಇಲಾಖೆಗೆ ಮಾರ್ಗದರ್ಶನ ನೀಡಿ ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿ ನಿಜವಾದ ಫಲಾನುಭವಿಗಳಿಗೆ ಹಣ ಸಂದಾಯ ವಾಗುವಂತೆ ಹಾಗೂ ‌ಮನೆ ಮಂಜೂರು ಆಗುವಂತೆ ನೋಡಿಕೊಳ್ಳಬೇಕು…

ರಘುರಾಜ್ ಹೆಚ್.ಕೆ…9449553305…

Previous article
Next article
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...