Tuesday, April 29, 2025
Google search engine
Homeರಾಜ್ಯನೂತನ ಅಧ್ಯಕ್ಷರಾಗಿ ಯೋಗೇಶ ಅವಿರೋಧ ಆಯ್ಕೆ ಸಾಲ ವಸೂಲಾತಿಗೆ ಆದ್ಯತೆ: ಯೋಗೇಶ್..!!

ನೂತನ ಅಧ್ಯಕ್ಷರಾಗಿ ಯೋಗೇಶ ಅವಿರೋಧ ಆಯ್ಕೆ ಸಾಲ ವಸೂಲಾತಿಗೆ ಆದ್ಯತೆ: ಯೋಗೇಶ್..!!


ಶಿವಮೊಗ್ಗ: ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿ.ದ ನೂತನ ಅಧ್ಯಕ್ಷರಾಗಿ ಸಂಘದ ನಿರ್ದೇಶಕರೂ ಆದ ಹೊಳಲೂರು ಮಾರುತಿ ಪ.ಪೂ.ಕಾಲೇಜಿನ (ಹೈಸ್ಕೂಲ್ ವಿಭಾಗ) ಮುಖ್ಯೋಪಾಧ್ಯಾಯರಾದ ಯೋಗೇಶ್ ಎಸ್. ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಸರ್ಕಾರದ ಕೆ-2 ಜಾರಿಯಿಂದಾಗಿ ಸಾಲ ಮರುಪಾವತಿಗೆ ಸಮಸ್ಯೆಯಾಗಿದೆ. ಆ ಕುರಿತು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ಸಾಲ ಪಡೆದ ಸಂಘದ ಸದಸ್ಯಸು ಮರು ಪಾವತಿಗೂ ಆದ್ಯ ಗಮನ ನೀಡಬೇಕು. ಆಯಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರೂ ಮುತುವರ್ಜಿ ವಹಿಸಬೇಕು ಎಂದು ಅವರು ವಿನಂತಿಸಿದರಲ್ಲದೆ ಸುಸ್ತಿದಾರರು ಸಾಲ ಮರುಪಾವತಿ ಮಾಡಿ ಮುಂದಾಗುವ ಕಾನೂನಾತ್ಮಕ ತೊಡಕುಗಳಿಂದ ಪಾರಾಗಬೇಕು ಎಂದು ಕಿವಿಮಾತು ಹೇಳಿದರು.
ತಾವು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಲು ಸಹಕರಿಸಿದ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರಿಗೆ ಅವರು ಇದೇ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸಿದರು.
ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ.ಬಾಲಕೃಷ್ಣ ಹೆಗಡೆ, ಎಚ್.ಪ್ರಭಾಕರ, ಎಸ್.ಎಚ್.ಪ್ರಶಾಂತ, ಉಪಾಧ್ಯಕ್ಷರಾದ ಬಿ.ಎಂ.ರಘು, ನಿರ್ದೇಶಕರಾದ ಜ್ಯೋತಿ, ರಾಜು, ಕೆಂಚಮ್ಮ, ಸುರೇಶ, ಪರಶುರಾಮಪ್ಪ, ರುದ್ರಪ್ಪ, ಮಂಜಪ್ಪ ಮೊದಲಾದವರಿದ್ದರು.
ಸಹಕಾರ ಸಂಘಗಳ ಇಲಾಖೆಯ ಶ್ರೀಮತಿ ಜಲಜಾಕ್ಷಿ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...