Saturday, June 14, 2025
Google search engine
Homeರಾಜ್ಯನೂತನ ಅಧ್ಯಕ್ಷರಾಗಿ ಯೋಗೇಶ ಅವಿರೋಧ ಆಯ್ಕೆ ಸಾಲ ವಸೂಲಾತಿಗೆ ಆದ್ಯತೆ: ಯೋಗೇಶ್..!!

ನೂತನ ಅಧ್ಯಕ್ಷರಾಗಿ ಯೋಗೇಶ ಅವಿರೋಧ ಆಯ್ಕೆ ಸಾಲ ವಸೂಲಾತಿಗೆ ಆದ್ಯತೆ: ಯೋಗೇಶ್..!!


ಶಿವಮೊಗ್ಗ: ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿ.ದ ನೂತನ ಅಧ್ಯಕ್ಷರಾಗಿ ಸಂಘದ ನಿರ್ದೇಶಕರೂ ಆದ ಹೊಳಲೂರು ಮಾರುತಿ ಪ.ಪೂ.ಕಾಲೇಜಿನ (ಹೈಸ್ಕೂಲ್ ವಿಭಾಗ) ಮುಖ್ಯೋಪಾಧ್ಯಾಯರಾದ ಯೋಗೇಶ್ ಎಸ್. ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಸರ್ಕಾರದ ಕೆ-2 ಜಾರಿಯಿಂದಾಗಿ ಸಾಲ ಮರುಪಾವತಿಗೆ ಸಮಸ್ಯೆಯಾಗಿದೆ. ಆ ಕುರಿತು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ಸಾಲ ಪಡೆದ ಸಂಘದ ಸದಸ್ಯಸು ಮರು ಪಾವತಿಗೂ ಆದ್ಯ ಗಮನ ನೀಡಬೇಕು. ಆಯಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರೂ ಮುತುವರ್ಜಿ ವಹಿಸಬೇಕು ಎಂದು ಅವರು ವಿನಂತಿಸಿದರಲ್ಲದೆ ಸುಸ್ತಿದಾರರು ಸಾಲ ಮರುಪಾವತಿ ಮಾಡಿ ಮುಂದಾಗುವ ಕಾನೂನಾತ್ಮಕ ತೊಡಕುಗಳಿಂದ ಪಾರಾಗಬೇಕು ಎಂದು ಕಿವಿಮಾತು ಹೇಳಿದರು.
ತಾವು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಲು ಸಹಕರಿಸಿದ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರಿಗೆ ಅವರು ಇದೇ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸಿದರು.
ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ.ಬಾಲಕೃಷ್ಣ ಹೆಗಡೆ, ಎಚ್.ಪ್ರಭಾಕರ, ಎಸ್.ಎಚ್.ಪ್ರಶಾಂತ, ಉಪಾಧ್ಯಕ್ಷರಾದ ಬಿ.ಎಂ.ರಘು, ನಿರ್ದೇಶಕರಾದ ಜ್ಯೋತಿ, ರಾಜು, ಕೆಂಚಮ್ಮ, ಸುರೇಶ, ಪರಶುರಾಮಪ್ಪ, ರುದ್ರಪ್ಪ, ಮಂಜಪ್ಪ ಮೊದಲಾದವರಿದ್ದರು.
ಸಹಕಾರ ಸಂಘಗಳ ಇಲಾಖೆಯ ಶ್ರೀಮತಿ ಜಲಜಾಕ್ಷಿ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!