Tuesday, June 17, 2025
Google search engine
Homeರಾಜ್ಯಬಂಟ ಸಮಾಜದ ಕೊಡುಗೈ ದಾನಿ ಕೆ ಪ್ರಕಾಶ್ ಶೆಟ್ಟಿ ಇವರಿಂದ ಶಿವಮೊಗ್ಗ ಬಂಟ ಸಮುದಾಯ...

ಬಂಟ ಸಮಾಜದ ಕೊಡುಗೈ ದಾನಿ ಕೆ ಪ್ರಕಾಶ್ ಶೆಟ್ಟಿ ಇವರಿಂದ ಶಿವಮೊಗ್ಗ ಬಂಟ ಸಮುದಾಯ ಭವನ ಕಟ್ಟಡಕ್ಕೆ 50 ಲಕ್ಷ ದೇಣಿಗೆ..!!

ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ಬಂಟ ಸಮಾಜದ ಸಮುದಾಯ ಭವನ ಕಟ್ಟಡಕ್ಕೆ ಕರ್ನಾಟಕ ಬಂಟ ಸಮಾಜದ ಕೊಡುಗೈ ದಾನಿ, ಹೃದಯ ಶ್ರೀಮಂತ ಹಾಗೂ ಬಡವರ ಬಂಧು ಎಂದೇ ಪ್ರಖ್ಯಾತರಾದ ಬೆಂಗಳೂರು ಎಂ ಆರ್ ಜಿ ಗ್ರೂಪ್ ನ ಛೇರ್ಮನ್ ಶ್ರೀ ಪ್ರಕಾಶ್ ಶೆಟ್ಟಿ ಇವರು 50 ಲಕ್ಷ ರೂ.ಗಳ ದೇಣಿಗೆ ನೀಡಿರುತ್ತಾರೆ.


ಸಮಾಜದ ಎಲ್ಲ ವರ್ಗದ ಜನರಿಗೆ ಪ್ರಮುಖವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಬಡವರು, ನಿರ್ಗತಿಕರು, ಪ್ರತಿಭಾವಂತರು ಹಾಗೂ ಕೊರೋನಾ ಸಂದರ್ಭದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟಸಾಧ್ಯವಾಗಿದ್ದ ಸಾವಿರಾರು ಜನರಿಗೆ ಕೊಟ್ಯಂತರ ರೂ.ಗಳ ಹಣ ಸಹಾಯ, ಆಹಾರ ಸಾಮಗ್ರಿಗಳು, ಔಷಧಿಗಳು, ನಿರ್ಗತಿಕರಿಗೆ ವಸತಿ, ಶಿಕ್ಷಣ ಹೀಗೆ ಹಲವು ಹತ್ತು ರೀತಿಯಲ್ಲಿ ಸಹಾಯ ಹಸ್ತ ಚಾಚಿದ ಮಹಾದಾನಿ ಪ್ರಕಾಶ್ ಶೆಟ್ಟಿಯವರು.
ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಕಾರ್ಯಕಾರಿ ಸಮಿತಿ, ಕಟ್ಟಡ ಸಮಿತಿ, ಹಿಂದಿನ ಅಧ್ಯಕ್ಷರುಗಳು ಮತ್ತು ಸಮಸ್ತ ಸಮಾಜ ಬಾಂಧವರ ಪರವಾಗಿ ಕೆ. ಪ್ರಕಾಶ್ ಶೆಟ್ಟಿ ಇವರಿಗೆ ಹೃದಯಪೂರ್ವಕ ಅಭಿನಂದನೆಗಳು ಮತ್ತು ಸಾಷ್ಠಾಂಗ ಪ್ರಣಾಮಗಳನ್ನು ಸಲ್ಲಿಸುತ್ತೇವೆ ಎಂದು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಡಾ. ಎ. ಸತೀಶ್ ಕುಮಾರ್ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷರಾದ ಶ್ರೀ ಎಸ್. ಕೃಷ್ಣ ಶೆಟ್ಟಿ ಹಾಗೂ ಸಂಘದ ನಿರ್ದೇಶಕರು ಮತ್ತು ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಾಕರ್ ಶೆಟ್ಟಿ ಇವರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
..

ರಘುರಾಜ್ ಹೆಚ್.ಕೆ..9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!