
ಶಿವಮೊಗ್ಗ : ನಗರದಲ್ಲಿ ಕಾನೂನು ಸುವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ರೌಡಿ ಆಸಾಮಿಗಳ ಮೇಲೆ ಹೆಚ್ಚಿನ ನಿಗಾವಹಿಸುವ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಈ ದಿನ ದಿನಾಂಕಃ-16-11-2022 ರಂದು ಸಂಜೆ ಶಿವಮೊಗ್ಗ ನಗರದ ಡಿಎಆರ್ ಆವರಣದಲ್ಲಿ ಶಿವಮೊಗ್ಗ ನಗರದ ದೊಡ್ಡಪೇಟೆ, ಕೋಟೆ, ತುಂಗಾನಗರ, ಶಿವಮೊಗ್ಗ ಗ್ರಾಮಾಂತರ, ಜಯನಗರ ಮತ್ತು ವಿನೋಭನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ ಒಟ್ಟು 82 ಚಟುವಟಿಕೆ ಉಳ್ಳ ರೌಡಿ ಆಸಾಮಿಗಳ ಪೆರೇಡ್ ನಡೆಸಿ, ಅವರುಗಳ ಆದಾಯದ ಮೂಲ ಮತ್ತು ಜೀವನೋಪಾಯಕ್ಕಾಗಿ ಮಾಡುತ್ತಿರುವ ಕೆಲಸಗಳ ಬಗ್ಗೆ ವಿಚಾರಣೆ ನಡೆಸಿದರು.
ವಾರದಲ್ಲಿ ಎರಡು ದಿನಗಳು ಕಡ್ಡಾಯವಾಗಿ ಠಾಣೆಗೆ ಹಾಜರಾಗಿ ಹಾಜರಾತಿ ನೀಡುವಂತೆ ಸೂಚನೆ ನೀಡಿದರು ಮತ್ತು ಇತ್ತೀಚಿನ ದಿನಗಳಲ್ಲಿ ಯಾವುದಾದರೂ ಅಪಾರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆಯೂ ಸಹಾ ಪರಿಶಿಲನೆ ನಡೆಸಿ, ಇನ್ನು ಮುಂದೆ ಯಾವುದೇ ಕಾನೂನು ಬಾಹೀರ ಚಟುವಟಿಕೆ ಮತ್ತು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು…
ರಘುರಾಜ್ ಹೆಚ್.ಕೆ…9449553305…