
ಉಡುಪಿ ,ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಗಾಗಿ ತೆರಳುತಿದ್ದ ಆರೋಗ್ಯ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕ(ಆರ್ ಸಿ ಹೆಚ್) ಡಾ.ಶ್ರೀನಿವಾಸ್ ಮಾರ್ಗ ಮಧ್ಯೆ ಪ್ರಾ.ಆ.ಕೇಂದ್ರ ಮೇಗರವಳ್ಳಿಗೆ ಅನಿರೀಕ್ಷಿತ ಬೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು,ಪ್ರಾ.ಆ.ಕೇಂದ್ರ ಮೇಗರವಳ್ಳಿಯ ವೈದ್ಯಾಧಿಕಾರಿ, ಸಿಬ್ಬಂದಿಗಳೊಂದಿಗೆ ಆಸ್ಪತ್ರೆಯ ಕುಂದುಕೊರತೆಗಳನ್ನು ಸರಿಪಡಿಸಿ ಜನರಿಗೆ ಇನ್ನಷ್ಟು ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ದೊರಕಿಸುವತ್ತ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಪ್ರಾ.ಆ.ಕೇಂದ್ರ ಮೇಗರವಳ್ಳಿಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿ,ಲ್ಯಾಬ್ ಟೆಕ್ನಿಕಲ್ ಅಧಿಕಾರಿ, ಪ್ರಾ.ಆ.ಸುರಕ್ಷಾಧಿಕಾರಿ,ಪ್ರಾ.ಆ.ನಿರೀಕ್ಷಣಾಧಿಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಪ್ರಾ.ಆ.ಕೇಂದ್ರಕ್ಕೆ ಅಂಬ್ಯೂಲೆನ್ಸ್ ಸೌಲಭ್ಯ ಕಲ್ಪಿಸುವಂತೆ ಗ್ರಾಮ ಪಂಚಾಯತ್ ವತಿಯಿಂದ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಕರ್ತವ್ಯದ ವೇಳೆಯಲ್ಲಿ ಸಾರ್ವಜನಿಕರಿಗೆ ಯಾವುದೇ ನ್ಯೂನ್ಯತೆಗಳಾಗದಂತೆ ಸಮರ್ಪಕ ಆರೋಗ್ಯ ಸೇವೆಗಳನ್ನು ದೊರಕಿಸುವತ್ತ ವೈದ್ಯಾಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ಸೂಚಿಸಿ, ಹೆಚ್ಚಿನ ಸೌಲಭ್ಯಗಳನ್ನು ದೊರಕಿಸುವ ಬಗ್ಗೆ ಪರಿಶೀಲಿಸಿ ಸಾಧ್ಯವಿರುವ ಎಲ್ಲಾ ಅನುಕೂಲತೆ ಕಲ್ಪಿಸಿಕೊಡುವುದಾಗಿ ತಿಳಿಸಿದರು.
ತಮ್ಮ ಜನಪರ ಕಾಳಜಿ, ಪ್ರೇರಣಾತ್ಮಕ ನಡೆ ನುಡಿಗಳಿಂದ ಇಲಾಖೆಯಲ್ಲಿ ಸಾಕಷ್ಟು ಸಕಾರಾತ್ಮಕ ಬದಲಾವಣೆ ತರಲು ವಿಶೇಷ ಶ್ರಮ ವಹಿಸುತ್ತಿರುವ ಅಪರೂದ ವ್ಯಕ್ತಿತ್ವದ ಸಹೃದಯಿ ಅಧಿಕಾರಿ ಡಾ.ಶ್ರೀನಿವಾಸ್ ರವರನ್ನು ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಪ್ರಾ.ಆ.ಕೇಂದ್ರದ ವತಿಯಿಂದ ಗೌರವಿಸಲಾಯಿತು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ಅಜಿತ್ ಅಣ್ಣುವಳ್ಳಿ,ಪಾರ್ವತಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಮೋದ್ ಹೆಗಡೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ, ಪ್ರಾ.ಆ.ಕೇಂದ್ರ ಮೇಗರವಳ್ಳಿಯ ಆಯುಷ್ ವೈದ್ಯಾಧಿಕಾರಿ ಡಾ.ವಿನೋಧ್ ಕುಮಾರ್, ಸೇರಿದಂತೆ ಗ್ರಾಮ ಪಂಚಾಯತಿ ಹಾಗೂ ಪ್ರಾ.ಆ.ಕೇಂದ್ರ ಮೇಗರವಳ್ಳಿಯ ಸಿಬ್ಬಂದಿಗಳು ಹಾಜರಿದ್ದರು...
ರಘುರಾಜ್ ಹೆಚ್.ಕೆ…9449553305…