Wednesday, June 18, 2025
Google search engine
Homeರಾಜ್ಯತೀರ್ಥಹಳ್ಳಿ::ಪ್ರಾ.ಆ.ಕೇಂದ್ರ ಮೇಗರವಳ್ಳಿಗೆ ಆರೋಗ್ಯ ಇಲಾಖಾ ರಾಜ್ಯ ಯೋಜನಾ ನಿರ್ದೇಶಕ ಡಾ.ಶ್ರೀನಿವಾಸ್ ಭೇಟಿ..!! ಅಗತ್ಯವಿರುವ ಸಿಬ್ಬಂದಿಗಳನ್ನು ಒದಗಿಸುವ...

ತೀರ್ಥಹಳ್ಳಿ::ಪ್ರಾ.ಆ.ಕೇಂದ್ರ ಮೇಗರವಳ್ಳಿಗೆ ಆರೋಗ್ಯ ಇಲಾಖಾ ರಾಜ್ಯ ಯೋಜನಾ ನಿರ್ದೇಶಕ ಡಾ.ಶ್ರೀನಿವಾಸ್ ಭೇಟಿ..!! ಅಗತ್ಯವಿರುವ ಸಿಬ್ಬಂದಿಗಳನ್ನು ಒದಗಿಸುವ ಭರವಸೆ..!!!


ಉಡುಪಿ ,ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಗಾಗಿ ತೆರಳುತಿದ್ದ ಆರೋಗ್ಯ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕ(ಆರ್ ಸಿ ಹೆಚ್) ಡಾ.ಶ್ರೀನಿವಾಸ್ ಮಾರ್ಗ ಮಧ್ಯೆ ಪ್ರಾ.ಆ.ಕೇಂದ್ರ ಮೇಗರವಳ್ಳಿಗೆ ಅನಿರೀಕ್ಷಿತ ಬೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು,ಪ್ರಾ.ಆ.ಕೇಂದ್ರ ಮೇಗರವಳ್ಳಿಯ ವೈದ್ಯಾಧಿಕಾರಿ, ಸಿಬ್ಬಂದಿಗಳೊಂದಿಗೆ ಆಸ್ಪತ್ರೆಯ ಕುಂದುಕೊರತೆಗಳನ್ನು ಸರಿಪಡಿಸಿ ಜನರಿಗೆ ಇನ್ನಷ್ಟು ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ದೊರಕಿಸುವತ್ತ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಪ್ರಾ.ಆ.ಕೇಂದ್ರ ಮೇಗರವಳ್ಳಿಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿ,ಲ್ಯಾಬ್ ಟೆಕ್ನಿಕಲ್ ಅಧಿಕಾರಿ, ಪ್ರಾ.ಆ.ಸುರಕ್ಷಾಧಿಕಾರಿ,ಪ್ರಾ.ಆ.ನಿರೀಕ್ಷಣಾಧಿಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಪ್ರಾ.ಆ.ಕೇಂದ್ರಕ್ಕೆ ಅಂಬ್ಯೂಲೆನ್ಸ್ ಸೌಲಭ್ಯ ಕಲ್ಪಿಸುವಂತೆ ಗ್ರಾಮ ಪಂಚಾಯತ್ ವತಿಯಿಂದ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಕರ್ತವ್ಯದ ವೇಳೆಯಲ್ಲಿ ಸಾರ್ವಜನಿಕರಿಗೆ ಯಾವುದೇ ನ್ಯೂನ್ಯತೆಗಳಾಗದಂತೆ ಸಮರ್ಪಕ ಆರೋಗ್ಯ ಸೇವೆಗಳನ್ನು ದೊರಕಿಸುವತ್ತ ವೈದ್ಯಾಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ಸೂಚಿಸಿ, ಹೆಚ್ಚಿನ ಸೌಲಭ್ಯಗಳನ್ನು ದೊರಕಿಸುವ ಬಗ್ಗೆ ಪರಿಶೀಲಿಸಿ ಸಾಧ್ಯವಿರುವ ಎಲ್ಲಾ ಅನುಕೂಲತೆ ಕಲ್ಪಿಸಿಕೊಡುವುದಾಗಿ ತಿಳಿಸಿದರು.

ತಮ್ಮ ಜನಪರ ಕಾಳಜಿ, ಪ್ರೇರಣಾತ್ಮಕ ನಡೆ ನುಡಿಗಳಿಂದ ಇಲಾಖೆಯಲ್ಲಿ ಸಾಕಷ್ಟು ಸಕಾರಾತ್ಮಕ ಬದಲಾವಣೆ ತರಲು  ವಿಶೇಷ ಶ್ರಮ ವಹಿಸುತ್ತಿರುವ ಅಪರೂದ ವ್ಯಕ್ತಿತ್ವದ ಸಹೃದಯಿ ಅಧಿಕಾರಿ ಡಾ.ಶ್ರೀನಿವಾಸ್ ರವರನ್ನು ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಪ್ರಾ.ಆ.ಕೇಂದ್ರದ ವತಿಯಿಂದ ಗೌರವಿಸಲಾಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ಅಜಿತ್ ಅಣ್ಣುವಳ್ಳಿ,ಪಾರ್ವತಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಮೋದ್ ಹೆಗಡೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ, ಪ್ರಾ.ಆ.ಕೇಂದ್ರ ಮೇಗರವಳ್ಳಿಯ ಆಯುಷ್ ವೈದ್ಯಾಧಿಕಾರಿ ಡಾ.ವಿನೋಧ್ ಕುಮಾರ್, ಸೇರಿದಂತೆ ಗ್ರಾಮ ಪಂಚಾಯತಿ ಹಾಗೂ ಪ್ರಾ.ಆ.ಕೇಂದ್ರ ಮೇಗರವಳ್ಳಿಯ ಸಿಬ್ಬಂದಿಗಳು ಹಾಜರಿದ್ದರು...

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!