ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ
ರಾಜ್ಯ ಸಚಿವ ಸಂಪುಟದಲ್ಲಿ, ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು, 25 ಹಾಸಿಗೆಗಳ, ಸಮುದಾಯ ಆರೋಗ್ಯ ಕೇಂದ್ರ ವನ್ನಾಗಿ, ಉನ್ನತೀಕರಿಸಲು, ಅಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಉಪಸ್ಥಿತರಿದ್ದ ಸಂಪುಟದ ಸಭೆ, ಈ ನಿರ್ಧಾರ ಕೈಗೊಂಡಿದ್ದು, ಬಹಳ ದಿನಗಳಿಂದ ಬೇಡಿಕೆಯಾಗಿಯೇ ಉಳಿದಿದ್ದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ.
2022-23 ನೇ ಸಾಲಿನ ಆಯವ್ಯಯ ಭಾಷಣದಲ್ಲಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ರಾಜ್ಯದಲ್ಲಿ, ಹೆಚ್ಚಿನ ಕಾರ್ಯ ಒತ್ತಡವಿರುವ ಒಟ್ಟು 1೦೦ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 1೦೦೦ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಉನ್ನತೀಕರಿಸುವ ಯೋಜನೆಯನ್ನು, ಘೋಷಿಸಿದ್ದರು.
ಈ ಯೋಜನೆಯ ಲಾಭ ತಾಲೂಕಿನ ಜನತೆಗೆ ಪಡೆದುಕೊಳ್ಳಲು, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ವಿಶೇಷ ಮುತುವರ್ಜಿ ವಹಿಸಿದ್ದರು.
ತಾಲೂಕಿನ ಜನತೆಯ ಬಹಳ ದಿನಗಳ ಬೇಡಿಕೆಯನ್ನು ಈಡೇರಿಸಿದ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಕೃತಜ್ಞತೆ ಸಲ್ಲಿಸಿದ್ದಾರೆ….
ರಘುರಾಜ್ ಹೆಚ್.ಕೆ..9449553305…