
ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಧ್ಯಾಪಕ ವೃಂದದವರು ಹೊಸ ಪಿಂಚಣಿ ಯೋಜನೆ ಅಡಿಯಲ್ಲಿ ಬರುವ( NPS) ನೌಕರರು ಹಳೆ ಪಿಂಚಣಿ ಯೋಜನೆಯನ್ನು (OPS)ಜಾರಿಗೆ ತರುವಂತೆ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್ ಅರುಣ್ ಇವರ ಬಳಿ ಮನವಿ ಸಲ್ಲಿಸಿದರು.
ಡಿಸೆಂಬರ್ 19 ರಂದು ಹಮ್ಮಿಕೊಳ್ಳಲು ಉದ್ದೇಶಿಸಿರುವ ಬೃಹತ್ NPS ಸಮಾವೇಶಕ್ಕೆ ಆಗಮಿಸಿ ಬೆಂಬಲ ಸೂಚಿಸಿ ಮುಂಬರುವ ಅಧಿವೇಶನದಲ್ಲಿ ವಿಷಯವನ್ನು ಸದನದ ಮುಂದೆ ಪ್ರಸ್ತಾಪಿಸಲು ಕೋರಲಾಯಿತು.
ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕರುಗಳ ಜೊತೆ ಭೇಟಿಯ ನೇತೃತ್ವ ವಹಿಸಿದ್ದ ಡಾ. ಅನಿಲ್ ಕುಮಾರ್ ಎ ಬಿ ದೈಹಿಕ ಶಿಕ್ಷಣ ನಿರ್ದೇಶಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ ಉಪಸ್ಥಿತರಿದ್ದರು..
ರಘುರಾಜ್ ಹೆಚ್.ಕೆ..9449553305…