
ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೆ ತೆರೆಮರೆಯಲ್ಲಿ ತಯಾರಿ ನಡೆದಿದ್ದು…
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಡಿ.14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಸಂಪುಟ ವಿಸ್ತರಣೆ ನಡೆಯಲಿದ್ದು.
ಈ ಸುದ್ದಿಗೆ ಇಂಬು ನೀಡುವಂತೆ ಸಿಎಂ ಬೊಮ್ಮಾಯಿ ಎರಡು ದಿನಗಳ ಹಿಂದೆ ಸಂಘ-ಪರಿವಾರದ ಹಿರಿಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎನ್ನಲಾಗುತ್ತಿದ್ದು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಪೊಲೀಸ್ ಇಲಾಖೆಯಿಂದ ಕ್ಲಿನ್ ಚೀಟ್ ಸಿಕ್ಕಿರುವುದರಿಂದ ಹಿಂದೆ ಕೊಟ್ಟ ಮಾತಿನಂತೆ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕಿದೆ. ಇನ್ನೊಂದು ಕಡೆ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಇದ್ದರೆ ಪಕ್ಷ ತೊರೆಯುವುದಾಗಿ ರಮೇಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಪರಿಸ್ಥಿತಿ ಹತೋಟಿಗೆ ತರಲು ಬೊಮ್ಮಾಯಿ ಅವರಿಗೆ ಸಂಪುಟ ವಿಸ್ತರಣೆ ಕೊನೆಯ ಅಸ್ತ್ರವಾಗಿದೆ.
ಇನ್ನೊಂದು ಕಡೆ ಪಂಚಮಸಾಲಿ ಹೋರಾಟವನ್ನು ತಾತ್ಕಾಲಿಕವಾಗಿ ಶಮನ ಮಾಡುವುದಕ್ಕಾಗಿ ಆ ಸಮುದಾಯಕ್ಕೆ ಪ್ರಬಲ ಮುಖಂಡನನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅಥವಾ ಅರವಿಂದ ಬೆಲ್ಲದ ಪೈಕಿ ಒಬ್ಬರಿಗೆ ಸಂಪುಟಕ್ಕೆ ಸೇರಿಕೊಂಡು ಸೇರಿಸಿಕೊಂಡು ತಾತ್ಕಾಲಿಕವಾಗಿ ಆ ಸಮುದಾಯಕ್ಕೆ ಸಮಾಧಾನ ಮಾಡುವ ಯತ್ನ ತೆರೆಮರೆಯಲ್ಲಿ ನಡೆಸಲಾಗುತ್ತಿದೆ.
ಇಬ್ಬರು ಮಾಜಿ ಸಚಿವರ ಜತೆಗೆ ಜಾತಿ ಹಾಗೂ ಪ್ರಾದೇಶಿಕತೆ ಆಧರಿಸಿ ಮತ್ತೆ ನಾಲ್ವರಿಗೆ ಅವಕಾಶ ಸಿಗುವ ಸಾಧ್ಯತೆ ಇದ್ದು. ಅಧಿವೇಶನಕ್ಕೆ ಮುಂಚಿತವಾಗಿಯೇ ಸಂಪುಟ ವಿಸ್ತರಣೆ ಆಗುತ್ತಾ..? ಅಥವಾ ಅಧಿವೇಶನದ ನಂತರ ಪ್ರಕ್ರಿಯೆ ಪ್ರಾರಂಭವಾಗುತ್ತಾ ಕಾದು ನೋಡಬೇಕು…
ರಘುರಾಜ್ ಹೆಚ್.ಕೆ..9449553305…