
ಸಾಗರ :- ಸಾಗರ ತಾಲೂಕಿನ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಗುಂಪು ಗುಂಪಾಗಿ ಕಾಣಿಸಿಕೊಂಡ ಮರಿಗಳ ಸಮೇತ ಕಾಡು ಕೋಣಗಳು ಹಾಗೂ ಕಾಡೆಮ್ಮೆ ಗಳು, ಭಯಭೀತರಾದ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರೂ ಯಾವುದೇ ರೀತಿ ಕ್ರಮಕ್ಕೆ ಮುಂದಾಗದ ಅರಣ್ಯ ಇಲಾಖೆಯ ವಿರುದ್ಧ ತೀವ್ರ ಆಕ್ರೋಶದತ್ತ ಕಲ್ಲುಕೊಪ್ಪದ ಗ್ರಾಮದ ಭಾಗದಲ್ಲಿ ಹಿಂಡು ಹಿಂಡಾಗಿ ಮರಿಗಳ ಸಮೇತ ಕಾಡುಕೋಣಗಳು ಹಾಗೂ ಕಾಡೆಮ್ಮೆಗಳು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಅಧಿಕ ಭಯ ಹುಟ್ಟಿಸಿವೆ. ಏಕಾಏಕಿ 16 ಕಾಡುಕೋಣಗಳು ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರ ಆತಂಕವನ್ನು ದುಪ್ಪಟ್ಟುಗೊಳಿಸಿವೆ.
ಇನ್ನಾದರೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಡಮ್ಮೆಗಳಿಂದ ಜನರ ಜೀವವನ್ನು ರಕ್ಷಿಸಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ…
ಓಂಕಾರ ಎಸ್. ವಿ. ತಾಳಗುಪ್ಪ…