Thursday, June 19, 2025
Google search engine
Homeರಾಜ್ಯ"ಪಿಡಿಒ ಅಮಾನತು" ಚೋರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು, ಗ್ರಾಮಸ್ಥರಿಂದ ಇಡೀ ರಾತ್ರಿ ಧರಣಿ..!!

“ಪಿಡಿಒ ಅಮಾನತು” ಚೋರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು, ಗ್ರಾಮಸ್ಥರಿಂದ ಇಡೀ ರಾತ್ರಿ ಧರಣಿ..!!

ಶಿವಮೊಗ್ಗ :- ಚೋರಡಿ ಗ್ರಾಮ ಪಂಚಾಯಿತಿ ಗ್ರಾಪಂ ಪಿಡಿಒ ಅವರನ್ನು ಕಾರಣವೇ ಇಲ್ಲದೇ ಜಿಪಂ ಸಿಇಒ ಅಮಾನತು ಮಾಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಸ್ಥಳಕ್ಕೆ ಆಗಮಿಸಿ ಅಮಾನತು ಹಿಂದಕ್ಕೆ ಪಡೆಯುವವರೆಗೆ ಗ್ರಾಪಂ ಕಚೇರಿ ಬೀಗ ತೆರೆಯಲೂ ಬಿಡುವುದಿಲ್ಲ ಎಂದು ಗ್ರಾಪಂ ಸದಸ್ಯರು ಮತ್ತು ಸಾರ್ವಜನಿಕರು ಅಹೋರಾತ್ರಿ ಧರಣಿ ನಡೆಸಿದರು.
ತಾಲೂಕಿನ ಚೋರಡಿ ಗ್ರಾಪಂ ಆವರಣದಲ್ಲಿ ಸದಸ್ಯರು ಅಹೋರಾತ್ರಿ ಅರ್ನಿದಿಷ್ಟಾವಧಿ ಧರಣಿ ನಡೆಸಿದ್ದಾರೆ.

ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಸಂಬಂಧ ಹಿಂದೆಯೇ ಜಾಗ ಗುರುತಿಸಲಾಗಿದೆ. ಆ ಜಾಗವನ್ನು ಸ್ವಚ್ಛ ಮಾಡಲು ಎಲ್ಲಾ ಗ್ರಾಪಂ ಸದಸ್ಯರು ಪಿಡಿಒ ಜೊತೆಗೆ ಸೋಮವಾರ ತೆರಳಿದ್ದೆವು. ಅಲ್ಲಿ ಕೆಲವರು ಒತ್ತುವರಿ ಕೂಡ ಮಾಡಿದ್ದಾರೆ. ಆದರೆ ಒತ್ತುವರಿ ಜಾಗದ ವಿಚಾರಕ್ಕೆ ಹೋಗದೇ ಖಾಲಿ ಇರುವ ಜಾಗವನ್ನು ಮಾತ್ರ ಸ್ವಚ್ಛ ಮಾಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಒತ್ತುವರಿ ಮಾಡಿಕೊಂಡಿರುವ ಚಂದ್ರಕಲಾ ಎಂಬ ಮಹಿಳೆ ವಿಷ ಕುಡಿದಂತೆ ಮಾಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ. ಅದೇ ವೇಳೆ ದಲಿತ ಸಂಘರ್ಷ ಸಮಿತಿಯವರು ಜಿಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟಕ್ಕೇ ಜಿಪಂ ಸಿಇಒ, ಗ್ರಾಪಂ ಪಿಡಿಒ ಅವರನ್ನು ಅಮಾನತು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದೇ ವಾರದಲ್ಲಿ ಎರಡು ಬಾರಿ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ. ಪಿಡಿಒ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಮಾನತು ಮಾಡಿರುವುದು ಸರಿಯಲ್ಲ. ಕೂಡಲೇ ಜಿಪಂ ಸಿಇಒ ಗ್ರಾಮಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಬೇಕು. ಅಲ್ಲಿಯವರೆಗೂ ಧರಣಿ ಹಿಂಪಡೆಯುವುದಿಲ್ಲ. ಗ್ರಾಪಂ ಕಚೇರಿ ಬಾಗಿಲನ್ನೂ ತೆರೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಗ್ರಾಪಂ ಅಧ್ಯಕ್ಷೆ ಸುಧಾ ಆಂಜನೇಯ, ಉಪಾಧ್ಯಕ್ಷೆ ಶಾರದಮ್ಮ ಹೂವಪ್ಪ, ಸದಸ್ಯರಾದ ನಿರಂಜನ ಗೌಡ, ರಾಜೇಶ್, ಅಶೋಕ, ಶಿವಕುಮಾರ್ ಸೇರಿದಂತೆ ಎಲ್ಲಾ ಸದಸ್ಯರು, ಗ್ರಾಮಸ್ಥರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ

ಓಂಕಾರ ಎಸ್. ವಿ. ತಾಳಗುಪ್ಪ….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!