Thursday, June 19, 2025
Google search engine
Homeರಾಜ್ಯ"ಜಾಗೃತಿ ಟ್ರಸ್ಟ್ ಸೇವಾ ಸಂಸ್ಥೆ " ವತಿಯಿಂದ ಕುವೆಂಪು ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಏರ್ಪಡಿಸಿರುವ ಸಾಹಿತ್ಯೋತ್ಸವ...

“ಜಾಗೃತಿ ಟ್ರಸ್ಟ್ ಸೇವಾ ಸಂಸ್ಥೆ ” ವತಿಯಿಂದ ಕುವೆಂಪು ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ಏರ್ಪಡಿಸಿರುವ ಸಾಹಿತ್ಯೋತ್ಸವ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ಸರ್ವರಿಗೂ ಆದರದ ಸ್ವಾಗತ ಕೋರಿದ ಜಾಗೃತಿ ಟ್ರಸ್ಟ್ ಅಧ್ಯಕ್ಷ ಬಿ ನಾಗೇಶ್..!!

ಜಾಗೃತಿ ಟ್ರಸ್ಟ್ ಸೇವಾ ಸಂಸ್ಥೆ ಯು ಹಲವು ವರ್ಷಗಳಿಂದ ಕನ್ನಡ ನಾಡು ನುಡಿಗೆ ಸಂಬಂಧಿಸಿದ ಸಾಹಿತ್ಯಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಾಡಿನಾದ್ಯಂತ ನಡೆಸಿಕೊಂಡು ಬರುತ್ತಿದೆ. ಹೊರ ರಾಜ್ಯಗಳಲ್ಲೂ ಕೆಲವು ಕಾರ್ಯಕ್ರಮಗಳನ್ನು ನಡೆಸಿದೆ.
ಉದಾ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ.
ಇತ್ತೀಚೆಗೆ ಧರ್ಮಸ್ಥಳ,
ಕುವೆಂಪು ಅವರ ಕುಪ್ಪಳ್ಳಿ ಸೇರಿದಂತೆ ಹಲವೆಡೆ ನಡೆದ ವೈವಿಧ್ಯಮಯ ಕಾರ್ಯಕ್ರಮಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.


ಈ ಬಾರಿ ಜಾಗೃತಿ ಟ್ರಸ್ಟ್ ಮೈಸೂರಿನಲ್ಲಿ ಪುಸ್ತಕ ಬಿಡುಗಡೆ, ನಗೆ ಹಬ್ಬ ಮತ್ತು ಪ್ರಶಸ್ತಿ ವಿತರಣಾ ಸಮಾರಂಭ ಆಯೋಜಿಸಿ ಸಾಧಕ ಮಹಿಳೆಯರಿಗೆ ಕೆಂಪಮ್ಮ ಪುರಸ್ಕಾರವನ್ನು ನೀಡಿದ ಸಂಭ್ರಮವು ಅವಿಸ್ಮರಣೀಯ
ಯುವ ಕವಿಗಳಿಗೆ ವೇದಿಕೆಗಳನ್ನು ಕಲ್ಪಿಸಿ ಕೊಡುವ ಹಾಗೂ ಪ್ರೋತ್ಸಾಹ ನೀಡುವ ಕಾರ್ಯ ಯೋಜನೆಗಳು ಜಾಗೃತಿ ಟ್ರಸ್ಟ್ ನಿಂದ ನಿರಂತರವಾಗಿದೆ
30 -12 – 22 ಶುಕ್ರವಾರ ಕುವೆಂಪು ಜಯಂತಿ ಅಂಗವಾಗಿ
ಏರ್ಪಡಿಸಿರುವ ಸಾಹಿತ್ಯೋತ್ಸವ ಹಾಗೂ ಕವಿ ಗೋಷ್ಠಿ ಕಾರ್ಯಕ್ರಮ ರಾಜ್ಯಮಟ್ಟದಲ್ಲಿ ಅದ್ದೂರಿಯಾಗಿ ನಡೆಯಲಿದೆ ಒಂದು ಗಾಯನ ಹಾಗೂ ಒಂದು ಕವನ ವಾಚನ ನಿರಂತರವಾಗಿ ನಡೆಯುತ್ತಿರುತ್ತದೆ.

ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ ಎಂಬ ಕುವೆಂಪುರವರ ಕನ್ನಡಾಭಿಮಾನದ ಸಾಲುಗಳಿಗೆ ನಿಮ್ಮ ಗಾಯನ ಹಾಗೂ ನಿಮ್ಮ ಕವನ ವಾಚನಗಳು ಸುಮಧುರ ಮಲ್ಲಿಗೆಯಾಗಿ ಅರಳಿ ಬರಲಿ. ಕವಿ ಕಲ್ಪನೆಯಲ್ಲಿ ‌ಕಾವೇರಿ ಸಂಭ್ರಮಧಾರೆಯಾಗಿ ಬರಲಿ
ಮಾತೃಭಾಷೆ ಮಾತೃಭೂಮಿ ಮಡಿಲಲ್ಲಿ ಉದ್ಯಾನವನದ ಸೊಬಗಿನಸಿರಿಯಲ್ಲಿ ನಾವೆಲ್ಲರೂ ಸೇರಿ ಸಂಭ್ರಮಿಸೋಣ ಸರ್ವರಿಗೂ ಪ್ರೋತ್ಸಾಹಿಸೋಣ. ಕುವೆಂಪುರವರ ಆದರ್ಶ ತತ್ವಗಳನ್ನು ಅನುಸರಿಸೋಣ
ಅವರ ಕಾವ್ಯಧಾರೆ ಸಾಗರದಲ್ಲಿ ಮಿಂದೇಳೋಣ
ನಮ್ಮೆಲ್ಲರ ಜ್ಞಾನಾರ್ಜನೆಗೆ ಸ್ಪೂರ್ತಿಯಾಗಿಸಿಕೊಳ್ಳೋಣ

ತಾವು ಬನ್ನಿ ತಮ್ಮ ಸ್ನೇಹಿತರನ್ನು ಕರೆತನ್ನಿ.

ಕನ್ನಡ ಕನ್ನಡ ಬನ್ನಿ ನಮ್ಮ ಸಂಗಡ…

ದಿನಾಂಕ : 30-12-22, ಶುಕ್ರವಾರ
ಬೆಳಿಗ್ಗೆ : 10.15 ರಿಂದ.

ಸ್ಥಳ – ಶಾಂತಿನಗರ ನಂಜಪ್ಪ ಸರ್ಕಲ್ ಬಳಿ ಇರುವ ರಿಚ್ಮಂಡ್ ಟೌನ್ ಉದ್ಯಾನವನ ಟಿವಿ 9 ಬಳಿ ಬೆಂಗಳೂರು….

ರಘುರಾಜ್ ಹೆಚ್.ಕೆ‌..9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!