Thursday, June 19, 2025
Google search engine
Homeರಾಜ್ಯNEW YEAR: ಹೊಸ ವರ್ಷದ ಸಂಭ್ರಮ ಆಚರಣೆಗೆ 12 ಟಪ್ ರೋಲ್ಸ್ ಜಾರಿ ಮಾಡಿದ ಶಿವಮೊಗ್ಗ...

NEW YEAR: ಹೊಸ ವರ್ಷದ ಸಂಭ್ರಮ ಆಚರಣೆಗೆ 12 ಟಪ್ ರೋಲ್ಸ್ ಜಾರಿ ಮಾಡಿದ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ,ಕೆ ಮಿಥುನ್ ಕುಮಾರ್..!!


ಶಿವಮೊಗ್ಗ: ಇಂದು ಬೆಳಗ್ಗೆ 11:00 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪೊಲೀಸ್ ರಕ್ಷಣಾಧಿಕಾರಿಗಳಾದ ಜಿಕೆ ಮಿಥುನ್ ಕುಮಾರ್ ಶಿವಮೊಗ್ಗ ರವರು ಮುಂಬರುವ ಹೊಸ ವರ್ಷ ಆಚರಣೆಯ ಸಂಬಂಧ ಹೋಟೆಲ್, ಕ್ಲಬ್ ಮತ್ತು ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿ, ಈ ಕೆಳಕಂಡ ಸೂಚನೆಗಳನ್ನು ನೀಡಿದ್ದಾರೆ.

1) ಸರ್ಕಾರದ ಆದೇಶದ ಅನ್ವಯ ಹೊಸ ವರ್ಷ ಆಚರಣೆಯನ್ನು ಬೆಳಗಿನ ಜಾವ 01:00 ಗಂಟೆಯ ಒಳಗಾಗಿ ಮುಕ್ತಾಯಗೊಳಿಸುವುದು.

2) ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು.

3) ಸಂಭ್ರಮಾಚರಣೆಯ ವೇಳೆ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸಬಾರದು.

4) ಮಧ್ಯ ಮಾರಾಟವನ್ನು ರಾತ್ರಿ 11:30 ರ ವರೆಗೆ ಮಾತ್ರ ಮಾಡುವುದು.

5) ಮಧ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡದೇ, ಮಧ್ಯಪಾನ ಮಾಡದೇ ಇರುವವರು ಚಾಲನೆ ಮಾಡುವುದು.

6) ನಿಗದಿ ಪಡಿಸಿದ ಶಬ್ದ ಮಿತಿಯನ್ನು ಮೀರಿ ಸೌಂಡ್ ಸಿಸ್ಟಂ ಗಳನ್ನು ಬಳಸುವಂತಿಲ್ಲ.

7) ಸಂಭ್ರಮಾಚರಣೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ವ್ಯವಸ್ಥಿತವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು.

8) ಗುಂಪನ್ನು ನಿಯಂತ್ರಿಸುವ ಸಂಬಂಧ ಒಂದಕ್ಕಿಂತ ಹೆಚ್ಚು ಪ್ರವೇಶ ದ್ವಾರಗಳನ್ನು ನಿರ್ಮಿಸುವುದು.

9) ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಸುವುದು.

10) 60 ವರ್ಷ ಮೇಲ್ಪಟ್ಟ ವೃದ್ಧರು, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳು ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸದೇ ಇರುವುದು ಸೂಕ್ತವಾಗಿರುತ್ತದೆ.

11) ನೋ ಮಾಸ್ಕ್ ನೋ ಎಂಟ್ರಿ ಬೋರ್ಡ್ ಗಳನ್ನು ಸಾರ್ವಜನಿಕರವಾಗಿ ಎದ್ದು ಕಾಣುವ ರೀತಿಯಲ್ಲಿ ಹಾಕುವುದು.

12) ಹೊಸ ವರ್ಷ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರಿಗೂ ಕಡ್ಡಾಯವಾಗಿ ಥರ್ಮಲ್ ಸ್ರ್ಕೀನಿಂಗ್ ಗೆ ಒಳಪಡಿಸುವುದು.

ಈ ಸಂದರ್ಭದಲ್ಲಿ ಡಿವೈಎಸ್.ಪಿ ಡಿಸಿಆರ್.ಬಿ ಮತ್ತು ಡಿವೈಎಸ್.ಪಿ ಶಿವಮೊಗ್ಗ ಉಪ ವಿಭಾಗ, ಪೊಲೀಸ್ ನಿರೀಕ್ಷಕರವರು ಹಾಜರಿದ್ದರು.

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!