Thursday, June 19, 2025
Google search engine
Homeರಾಜ್ಯTHIRTHALLI BREAKING: ಕಾಡಾನೆ ಆನೆ ಆಗಮನ ಆತಂಕ ಬೇಡ ಗೃಹ ಸಚಿವ ಆರಗ ಜ್ಞಾನೇಂದ್ರ..!!

THIRTHALLI BREAKING: ಕಾಡಾನೆ ಆನೆ ಆಗಮನ ಆತಂಕ ಬೇಡ ಗೃಹ ಸಚಿವ ಆರಗ ಜ್ಞಾನೇಂದ್ರ..!!

ತೀರ್ಥಹಳ್ಳಿ : ಪಟ್ಟಣದಲ್ಲಿ ಕಾಡಾನೆ ಎಂಟ್ರಿಕೊಟ್ಟಿದೆ. ಕುರುವಳ್ಳಿಯಲ್ಲಿ ಕಾಡಾನೆ ಪ್ರತ್ಯಕ್ಷಗೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಇಂದು ಬೆಳಗಿನ ಜಾವ 3-30 ರ ಸಮಯದಲ್ಲಿ  ಕಾಡಾನೆ ಕಾಣಿಸಿಕೊಂಡಿದೆ. ರಾತ್ರಿ ಮೇಳಿಗೆ ಗ್ರಾಮದ ಕೆಳೆಕೆರೆಯಲ್ಲಿ ಕಂಡಿದ್ದ ಕಾಡಾನೆ ಕುರುವಳ್ಳಿಯಲ್ಲಿ ದಾಂದಲೆ ನಡೆಸಿದೆ.

4 ರಿಂದ 5 ವರ್ಷದ ಕಾಡಾನೆ ಎನ್ ಆರ್ ಪುರದಿಂದ ಬಂದಿರುವ ಅನುಮಾನ ವ್ಯಕ್ತವಾಗಿದೆ. ಕುರುವಳ್ಳಿಯ ನಾಗರಕಟ್ಟೆ ಸಮೀಪ ತುಂಗಾ ನದಿಗೆ ಕಾಡಾನೆ ಇಳಿದಿದೆ.

ಬೆಳಗ್ಗಿನ ಜಾವ 3.30 ರ ವೇಳೆಯಲ್ಲಿ ಕಾಣಿಸಿಕೊಂಡ ಆನೆ, ಸ್ಥಳೀಯ ನಿವಾಸಿಯೊಬ್ಬರಿಗೆ ಕಾಣಿಸಿಕೊಂಡಿದೆ. ಕುರುವಳ್ಳಿ ನಾಗರಾಜ್ ಎಂಬುವರ ಮನೆಯ ಮುಂದಿನ ಚಪ್ಪರದ ಕಂಬಗಳನ್ನ ಪುಡಿ ಮಾಡಿದೆ. ಸ್ಥಳದಲ್ಲಿ ಹೆಜ್ಜೆ ಗುರುತು ಕೂಡ ಪತ್ತೆಯಾಗಿದೆ.

2 ದಿನಗಳ ಹಿಂದೆ ಶೇಡ್ಗಾರ್, ಕಟ್ಟೆಹಕ್ಲು ಸಮೀಪ ಕಾಣಿಸಿಕೊಂಡಿದ್ದ ಕಾಡಾನೆ, ರಾಷ್ಟಿಯ ಹೆದ್ದಾರಿ 169 ರ ತೀರ್ಥಹಳ್ಳಿ-ಕೊಪ್ಪ- ಶೃಂಗೇರಿ ಮಾರ್ಗದಲ್ಲಿರುವ ಕುರುವಳ್ಳಿ ಮುಖ್ಯ ರಸ್ತೆಯಲ್ಲಿ ಓಡಾಡಿದೆ. ಅಂಗಡಿಯೊಂದರ ನೇಮ್ ಬೋರ್ಡ್ ನ್ನ ಹಾಳು ಮಾಡಿದೆ.

ಆಗುಂಬೆ ಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ತೀರ್ಥಹಳ್ಳಿಯ ಪಟ್ಟಣಕ್ಕೆ ಹೊಂದಿಕೊಂಡಿರುವ ಕುರುವಳ್ಳಿಯಲ್ಲಿ ಮೊದಲಬಾರಿಗೆ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಕಾಡಾನೆಯ ಹುಡುಕಾಟದಲ್ಲಿದ್ದಾರೆ.

ವಿಷಯ ತಿಳಿದ ತಕ್ಷಣ ಬೆಂಗಳೂರಿನಲ್ಲಿ ಇರುವ ಗೃಹ ಸಚಿವರು ಜಿಲ್ಲಾ ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಆನೆಯನ್ನು ಹಿಡಿಯಬೇಕು ಇಲ್ಲವಾದಲ್ಲಿ ದೂರದ ಕಾಡಿಗೆ ಓಡಿಸಬೇಕು ಎಂದು ಸೂಚಿಸಿದರಲ್ಲದೇ ಹಿಡಿಯಲು ಬೇಕಾದ ಮಾವುತರು ತರಬೇತಿ ಪಡೆದ ಆನೆಗಳು ಬೇಕಾದಲ್ಲಿ ಬಳಿಸಿಕೊಳ್ಳಬೇಕು ಸೂಕ್ತ ವ್ಯವಸ್ಥೆ ಮಾಡಿ ತಕ್ಷಣವೇ ಜನರಲ್ಲಿ ಇರುವ ಆತಂಕವನ್ನು ದೂರ ಮಾಡಬೇಕೆಂದು ಸೂಚಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಕಾರ್ಯಕ್ರಮದಲ್ಲಿ ಇರುವ ಗೃಹ ಸಚಿವರು ನಾಳೆ ಭಾನುವಾರ ಕ್ಷೇತ್ರಕ್ಕೆ ಆಗಮಿಸಲಿದ್ದು ಕ್ಷೇತ್ರದ ಜನರು ಕಾಡಾನೆ ಹಾವಳಿಯಿಂದ ಭಯಪಡುವ ಅಗತ್ಯತೆ ಇಲ್ಲ ಎಂದು ಪತ್ರಿಕೆಗೆ ಹೇಳಿಕೆ ನೀಡಿದ್ದಾರೆ….

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!