Thursday, June 19, 2025
Google search engine
Homeರಾಜ್ಯಸದಾ ಅಡಕೆ ಬೆಳೆಗಾರರ ಹಿತಾಸಕ್ತಿ ಕಾಳಜಿ ಇರುವ, ನನ್ನ ಬಗ್ಗೆ ಇಲ್ಲ _ಸಲ್ಲದ ಅಪಪ್ರಚಾರ: ಗೃಹ...

ಸದಾ ಅಡಕೆ ಬೆಳೆಗಾರರ ಹಿತಾಸಕ್ತಿ ಕಾಳಜಿ ಇರುವ, ನನ್ನ ಬಗ್ಗೆ ಇಲ್ಲ _ಸಲ್ಲದ ಅಪಪ್ರಚಾರ: ಗೃಹ ಸಚಿವ ಆರಗ ಜ್ಞಾನೇಂದ್ರ..!!

ಸಾಂಪ್ರದಾಯಿಕ ಪ್ರದೇಶದಲ್ಲಿ ಬೆಳೆಯುತ್ತಿರುವ ಅಡಕೆ ರೈತರ ಹಿತ ರಕ್ಷಣೆ ಬಗ್ಗೆ, ಸದನದಲ್ಲಿ ಮಾತನಾಡಿದ್ದನ್ನು, ತಿರುಚಿ, ನನ್ನ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ.

ಇದನ್ನು ಖಂಡಿಸುತ್ತೇನೆ.

ನನ್ನ ವಿರುದ್ಧ ಆರೋಪ ಮಾಡಲು, ಬೇರೆ ಏನೂ ಇಲ್ಲದ, ರಾಜಕೀಯ ವಿರೋಧಿಗಳು, ಮಲೆನಾಡು ಹಾಗೂ ಕರಾವಳಿ ಪ್ರದೇಶದ ಅಡಕೆ ಬೆಳೆಗಾರರ ಪರವಾಗಿ, ಮಾತನಾಡಿದ್ದನ್ನು, ಟೀಕೆ ಮಾಡಿದ್ದಾರೆ.

ಸದನದಲ್ಲಿ, ನಾನು ಮಾತನಾಡಿದ, ಒಟ್ಟು ಭಾಷಣದ, ಅರ್ಥವನ್ನು, ಗ್ರಹಿಸದೆ,
ನನ್ನ ಹೇಳಿಕೆಯನ್ನೇ ತಪ್ಪಾಗಿ ಬಿಂಬಿಸಿ, ಅಪಪ್ರಚಾರ ಹಾಗೂ ಸುಳ್ಳನ್ನು ಬಿತ್ತುವ ಹತಾಶ ಪ್ರಯತ್ನ ಮಾಡುತ್ತಿದ್ದಾರೆ.

ಅಡಕೆ ಬೆಳೆಗಾರರ ಭವಿಷ್ಯವನ್ನೇ, ಹೊಸಕಿ ಹಾಕುವ ಪ್ರಯತ್ನದಲ್ಲಿ, ಇವರು ಸುಪ್ರೀಂ ಕೋರ್ಟ್ ನಲ್ಲಿ, ಅಡಕೆ ಕ್ಯಾನ್ಸರ್ ಕಾರಕ ಎಂದು, ಅಫಿಡವಿಟ್ ಸಲ್ಲಿಸಿದ್ದನ್ನು ಯಾರೂ ಮರೆತಿಲ್ಲ.

ಇದನ್ನು ವಿರೋಧಿಸಿ, ಅಡಕೆ ಕ್ಯಾನ್ಸರ್ ಕಾರಕ ಅಲ್ಲ ಅದೊಂದು, ಆರೋಗ್ಯ ವರ್ಧಕ ಎಂದು ಯಶಸ್ವಿಯಾಗಿ, ವಾದ ಮಂಡಿಸಿ, ರೈತರ ಮೇಲಿದ್ದ ತೂಗು ಕತ್ತಿಯನ್ನು ನಿವಾರಣಾ ಮಾಡುವಲ್ಲಿ, ವಿಶೇಷ ಪ್ರಯತ್ನ ಮಾಡಿದ್ದನ್ನು, ಇಲ್ಲಿ ಸ್ಮರಿಸ ಬಯಸುತ್ತೇನೆ.

ಸಾಂಪ್ರದಾಯಿಕ ವಾಗಿ ಅಡಕೆ ಬೆಳೆಯುತ್ತಿರುವ ಪ್ರದೇಶದಲ್ಲಿ ಮಾತ್ರ, ಬಂದಿರುವ, ಹಾಗೂ ರೈತರಿಗೆ ಮಾರಕ ವಾಗಿರುವ, ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ಔಷಧ ಸಿಂಪರಣೆಗೆ ಸರಕಾರದಿಂದ ಅನುದಾನ ಬಿಡುಗಡೆ ಗೊಳಿಸಿದ್ದೇನೆ.

ಎಲೆ ಚುಕ್ಕೆ ರೋಗಕ್ಕೆ ಕಾರಣವಾದ ಅಂಶಗಳ ಮೇಲೆ ಸಂಶೋಧನೆ ನಡೆಸಲು, ಕೇಂದ್ರ ಸರಕಾರದ ಮೇಲೆ ಒತ್ತಡ ತಂದ ಪರಿಣಾಮವಾಗಿ, ಕೇಂದ್ರ , ಸಂಶೋಧಕರ ಹಾಗೂ ವಿಜ್ಞಾನಿಗಳ ತಂಡ ಬಂದಿದೆ.

ಮಾರುಕಟ್ಟೆಯಲ್ಲಿ ಅಡಕೆ ಬೆಳೆ ಧಾರಣೆಗೆ ಸ್ತಿರತೆ ಒದಗಿಸಲು ಅನುಕೂಲವಾಗುವಂತೆ, ಕೇಂದ್ರ ಸರಕಾರದ ಮೇಲೆ ಒತ್ತಡ ತಂದ ಪರಿಣಾಮವಾಗಿ ಅಡಕೆ ಬೆಳೆಯ ಕನಿಷ್ಠ ಉತ್ಪಾದನಾ ವೆಚ್ಚದರ ಹೆಚ್ಚಳಕ್ಕೆ ಸರಕಾರ ಒಪ್ಪಿಕೊಂಡಿದೆ. ಇಷ್ಟರಲ್ಲಿಯೇ ಈ ಸಂಬಂಧ ಆದೇಶ ಹೊರ ಬರಲಿದೆ.

ಅಡಕೆ ಬೆಳೆಗಾರರ ಹಿತ ಕಾಪಾಡಲು, ಕಟಿಬದ್ದ ವಾಗಿರುವ ನನ್ನ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ.

ಒಂದು ಕಾಲದಲ್ಲಿ, ಅಡಕೆ ಧಾರಣೆ ಕ್ವಿಂಟಾಲ್ ಗೆ ಎಂಬತ್ತು ಸಾವಿರ ರೂಪಾಯಿ ವರೆಗೂ ಹೋಗಿತ್ತು, ಅದರ ಪರಿಣಾಮವಾಗಿ, ಅಡಕೆ ಬೆಳೆ, ಅಸಂಪ್ರದಾಯಿಕ ಪ್ರದೇಶಗಳಲ್ಲಿಯೂ, ವ್ಯಾಪಕವಾಗಿ ವಿಸ್ತಾರ ಗೊಂಡ ಪರಿಣಾಮ, ನಂತರದ ದಿನಗಳಲ್ಲಿ 25 ರಿಂದ 30 ಸಾವಿರಕ್ಕೂ ಬಂದಿದ್ದನ್ನು ಮರೆಯಬಾರದು .

ಈ ಕಾರಣ ದಿಂದಲೇ, ಮಲೆನಾಡು ಹಾಗೂ ಕರಾವಳಿ ಪ್ರದೇಶಗಳನ್ನು ಬಿಟ್ಟು, ಬೇರೆ ಪ್ರದೇಶದಲ್ಲಿ ಅಡಕೆ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ಕೊಡಬಾರದು, ಎಂದು ಅಭಿಪ್ರಾಯ ಪಟ್ಟಿದ್ದೇನೆ ಎನ್ನುವುದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ…..

ರಘುರಾಜ್ ಹೆಚ್. ಕೆ9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!