
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಿಕಾರಿಪುರದಲ್ಲಿ ಮಾತನಾಡುತ್ತಾ ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತದೆ. ಈ ಸಂಬಂಧವಾಗಿ ಬಿಜೆಪಿ ಹೈಕಮಾಂಡ್ ನಾಯಕರುಗಳು ಚಿಂತನೆ ನಡೆಸುತ್ತಿದ್ದಾರೆ. ಎನ್ನುವ ಮಾತುಗಳನ್ನಾಡಿದ್ದರು..
ಇವರ ಹೇಳಿಕೆಯ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಚಿತ್ರದುರ್ಗದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ರಾಮಾತನಾಡುತ್ತಾ, ‘ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರ ನಾಯಕರೊಂದಿಗೆ ವಿಸ್ತೃತವಾಗಿ ಚರ್ಚಿಸಲಾಗಿದೆ.
ಶೀಘ್ರವೇ ಸಂಪುಟ ವಿಸ್ತರಣೆ ಆಗಲಿದೆ’ ಎಂದು ತಿಳಿಸಿದ್ದಾರೆ..
‘ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ವರಿಷ್ಠರ ಗಮನಕ್ಕೆ ತರಲಾಗಿದೆ. ಮತ್ತೊಂದು ಸುತ್ತಿನ ಸಭೆ ನಡೆದ ಬಳಿಕ ತೀರ್ಮಾನ ಹೊರಬೀಳಲಿದೆ. ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕಲ್ಪಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು…
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆ ಕುತೂಹಲ ಮೂಡಿಸಿದ್ದು ಮಾಜಿ ಸಚಿವರಿಗೆ ಸಂಪುಟದಲ್ಲಿ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ ಮಾಡುತ್ತದೆ.. ಎಂದು ಹೇಳಿರುವುದರಿಂದ ಹೈಕಮಾಂಡ್ ನಿರ್ಧಾರದ ಮೇಲೆ ಮಾಜಿ ಸಚಿವರ ಸಂಪುಟದ ಸ್ಥಾನದ ಭವಿಷ್ಯ ನಿಂತಿದೆ…
ರಘುರಾಜ್ ಹೆಚ್.ಕೆ..9449553305…