Friday, June 20, 2025
Google search engine
Homeರಾಜ್ಯShivamogga breaking: ಅಸ್ವಸ್ಥ ಮಕ್ಕಳ ಸಂಖ್ಯೆ 86 ಕ್ಕೆ ಏರಿಕೆ ಇನ್ನು ಬರುತ್ತಿದ್ದಾರೆ ಮಕ್ಕಳು..!! ಬಿಸಿಎಂ...

Shivamogga breaking: ಅಸ್ವಸ್ಥ ಮಕ್ಕಳ ಸಂಖ್ಯೆ 86 ಕ್ಕೆ ಏರಿಕೆ ಇನ್ನು ಬರುತ್ತಿದ್ದಾರೆ ಮಕ್ಕಳು..!! ಬಿಸಿಎಂ ಹಾಸ್ಟೆಲ್ ಮಕ್ಕಳು ಕೂಡ ಅಸ್ವಸ್ಥ..?! ಮಕ್ಕಳ ಅಸ್ವಸ್ಥತೆಗೆ ಕಾರಣವೇನು..?! ಸದ್ಯದ ಮಕ್ಕಳ ಪರಿಸ್ಥಿತಿ ಹೇಗಿದೆ ‌‌..?!

ಶಿವಮೊಗ್ಗ : ಮೇಲಿನ ಮತ್ತು ಕೆಳಗಿನ ಹನಸವಾಡಿಯ ಮುರಾರ್ಜಿ ಅಲ್ಪಸಂಖ್ಯಾತರ ವಸತಿ ನಿಲಯದ ವಿದ್ಯಾರ್ಥಿ/ವಿದ್ಯಾರ್ಥಿನಿಯರಲ್ಲಿ ವಾಂತಿ, ಹೊಟ್ಟೆನೋವು ಸೊಂಟನೋವಿನಂತಹ ಬೇನೆಗಳು ಕಾಣಿಸಿಕೊಂಡಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು.


ಯೋಗಥಾನ್ ನಲ್ಲಿ ಭಾಗಿಯಾಗಿದ್ದ ವಸತಿ ನಿಲಯದ ಮಕ್ಕಳು ಅಶ್ವಸ್ಥರಾಗಿದ್ದಾರೆ..

ಇಲ್ಲಿಯವರೆಗೂ ಸುಮಾರು 86 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮೆಗ್ಗಾನ್ ಗೆ ಬಂದು ದಾಖಲಾಗಿದ್ದಾರೆ. ತಕ್ಷಣಕ್ಕೆ ಒಆರ್ ಎಸ್ ಮತ್ತು ಇತರೆ ಗುಣಮುಖವಾಗುವ ಚಿಕಿತ್ಸೆ ನೀಡಲಾಗುತ್ತಿದೆ. ಹಾಸ್ಟೆಲ್ ನಲ್ಲಿ 540 ಮಕ್ಕಳಿದ್ದು ಅದರಲ್ಲಿ ಈಗಾಗಲೇ 77ಕ್ಕೂ ಹೆಚ್ಚು ಮಕ್ಕಳು ಮುರಾರ್ಜಿ ಮಕ್ಕಳಾಗಿದ್ದರೆ ಬಿಸಿಎಂ ಹಾಸ್ಟೆಲಿನ 9 ಜನ ಮಕ್ಕಳು ಬಂದು ದಾಖಲಾಗಿದ್ದರೆ. ಕೆಲ ಮಕ್ಕಳು ಮೆಗ್ಗಾನ್ ಗೆ ದೌಡಾಯಿಸುತ್ತಿದ್ದಾರೆ. ಎಲ್ಲ ಮಕ್ಕಳು ಅಸ್ವಸ್ಥರಾಗಿ ಕಂಡು ಬಂದಿದ್ದಾರೆ.

ಎಲ್ಲಾ ವಿದ್ಯಾರ್ಥಿ/ವಿದ್ಯಾರ್ಥಿನಿಯರಲ್ಲಿ ಕೆಲವರಿಗೆ ವಾಂತಿ, ಬೇದಿ ಬೆನ್ನು ನೋವು ಕಾಣಿಸಿಕೊಂಡಿದೆ. ಕುಂಸಿಯಲ್ಲಿಯ ಶಾಲೆಯ ಮಕ್ಕಳೂ ಸಹ ಮೆಗ್ಗಾನ್ ಗೆ ದಾಖಲಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೆಲ ಪೋಷಕರು ನಮ್ಮ ಅನುಮತಿ ಇಲ್ಲದೆ ಹಾಸ್ಟೆಲ್ ನವರು ಯೋಗಥಾನ್ ಗೆ ಕರೆದುಕೊಂಡು ಹೋಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಅನುಮತಿ ಪಡೆದು ಯೋಗಥಾನ್ ನಲ್ಲಿ ಭಾಗಿಯಾಗಬೇಕಿತ್ತು ಎಂದು ಆಸ್ಪತ್ರೆಯಲ್ಲಿ ಗಲಾಟೆಯನ್ನೂ ನಡೆಸಿದ್ದಾರೆ.


ಈ ಕುರಿತು ಮಾತನಾಡಿದ ಡಿಹೆಚ್ಒ ಡಾ. ರಾಜೇಶ್ ಸುರಗೀಹಳ್ಳಿ ಸ್ಥಳಕ್ಕೆ ತಮ್ಮ ಸಿಬ್ಬಂದಿಗಳನ್ನು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳನ್ನು ಕಳುಹಿಸಲಾಗಿದೆ. ಸರ್ವಲೆನ್ಸ್ ವಿಭಾಗದ ಮಲ್ಲಪ್ಪ ಅವರನ್ನು ಕಳುಹಿಸಲಾಗಿದೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಮಕ್ಕಳು ಅವಧಿ ಮುಗಿದಿರುವ ಮಜ್ಜಿಗೆಯನ್ನು ಕುಡಿದಿರುವುದೇ ಈ ಅಸ್ವಸ್ಥತೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.‌.

ಸಮಾಜ ಕಲ್ಯಾಣ ಇಲಾಖೆಯ ನಿರ್ಲಕ್ಷ ಮಕ್ಕಳ ಅಸ್ವಸ್ಥತೆಗೆ ಕಾರಣವಾಯಿತೇ..?!

ಯೋಗಥಾನಗೆ ಕರೆದುಕೊಂಡು ಬಂದು ದಾಖಲೆ ನಿರ್ಮಿಸಲು ಬಂದ ಮಕ್ಕಳು ಮೆಗ್ಗಾನ್ ನಲ್ಲಿ ಅಸ್ವಸ್ಥರಾಗಿ ಕಾಲ ಕಳೆಯುತ್ತಿದ್ದಾರೆ ‌..

ಇವರನ್ನು ಕರೆದುಕೊಂಡು ಬಂದವರು ಆರಾಮಾಗಿದ್ದಾರೆ…

ವೈದ್ಯರು ಸಿಬ್ಬಂದಿಗಳು ಯಾರು ಮಾಡಿದ ತಪ್ಪಿಗೆ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ನೋವು ಅನುಭವಿಸುತ್ತಿದ್ದಾರೆ….

ಈ ಪ್ರಕರಣವನ್ನು ಮಾನ್ಯ ಜಿಲ್ಲಾಧಿಕಾರಿಗಳು ಗಂಭೀರವಾಗಿ ತೆಗೆದುಕೊಂಡು ಸೂಕ್ತ ತನಿಖೆ ನಡೆಸಿ ಯಾರೇ ತಪ್ಪಿತಸ್ಥರಿದ್ದರು ಅವರಿಗೆ ಶಿಕ್ಷೆ ಆಗಬೇಕು ಇಂಥ ಪ್ರಕರಣಗಳು ಮತ್ತೆ ಮರುಕಳಿಸಬಾರದು….

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!