Friday, June 20, 2025
Google search engine
Homeರಾಜ್ಯBLOOD DONATION: ಗಣರಾಜ್ಯೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದಿಂದ ರಕ್ತದಾನ ಶಿಬಿರ..!!

BLOOD DONATION: ಗಣರಾಜ್ಯೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದಿಂದ ರಕ್ತದಾನ ಶಿಬಿರ..!!

ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ಶಾಖೆಯು ದಿನಾಂಕ: 25-1-23 ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸೊಪ್ಪುಗುಡ್ಡೆಯ ಐಎಂಎ ರೋಟರಿ ರಕ್ತನಿಧಿಯಲ್ಲಿ ರಕ್ತದಾನ ಮಾಡುವ ಮೂಲಕ 74 ನೇ ಗಣ ರಾಜ್ಯೋತ್ಸವವನ್ನು ಸಂಭ್ರಮಿಸುತ್ತಿದೆ.

ತಾಲ್ಲೂಕಿನ ವಿವಿಧ ಇಲಾಖೆಗಳ ಸಹೃದಯಿ ಸರ್ಕಾರಿ ನೌಕರರು,ಅಧಿಕಾರಿಗಳು ಹಾಗೂ ನಾಗರೀಕ ಬಂಧುಗಳ ಸಹಕಾರದಿಂದ ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣ ರಾಜ್ಯೋತ್ಸವದ ಸಂದರ್ಭಗಳಲ್ಲಿ ನಿರಂತರವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಯಶಸ್ವಿಯಾಗಿ ಸಂಘಟಿಸುತ್ತಿರುವ ಸಂಘದ ಹತ್ತನೆಯ ರಕ್ತದಾನ ಶಿಬಿರ ಇದಾಗಿದ್ದು, ಯಶಸ್ಸಿಗೆ ಸಹಕರಿಸಿದ ಪ್ರತಿಯೊಬ್ಬರನ್ನೂ ಸಂಘವು ಕೃತಜ್ಞತೆಯಿಂದ ಸ್ಮರಿಸುತ್ತದೆ.ವಿವಿಧ ಕಾರಣಗಳಿಂದ ರಕ್ತದ ಲಭ್ಯತೆ ಕಡಿಮೆ ಇರುವುದರಿಂದ ಈ ಬಾರಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಪಾಲ್ಗೊಳ್ಳುವ ಮೂಲಕ ರೋಗಿಗಳ ಜೀವ ಉಳಿಸುವ ಮಹತ್ವದದ ಕಾರ್ಯಕ್ಕೆ ಕೈ ಜೋಡಿಸುವಂತೆ ಸಂಘದ ಅಧ್ಯಕ್ಷ ಟಿ ವಿ ಸತೀಶ ಕೋರಿದ್ದಾರೆ.


ರಕ್ತದಾನದ ಬಗ್ಗೆ ಅನೇಕರಲ್ಲಿ ಗೊಂದಲ ಆತಂಕಗಳು ಈಗಲೂ ಇವೆ. ಅವಶ್ಯಕತೆ ಇರುವಷ್ಟು ರಕ್ತದ ಅಲಭ್ಯತೆಗೆ ಇದು ಪ್ರಮುಖ ಕಾರಣ. ಅರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಸರಾಸರಿ 5.5 ರಿಂದ 6 ಲೀಟರ್‌ ರಕ್ತವಿರುತ್ತದೆ. ರಕ್ತದಾನ ಪ್ರಕ್ರಿಯೆಯಲ್ಲಿ ಕೇವಲ 350 ಮಿ ಲೀ ನಷ್ಟೇ ರಕ್ತವನ್ನು ಸ್ವೀಕರಿಸುವುದರಿಂದ ದಾನಿಗೆ ಯಾವುದೇ ಅಪಾಯವಾಗುವುದಿಲ್ಲ. 18 ರಿಂದ 60 ವರ್ಷದೊಳಗಿನ 45 ಕೆ ಜಿ ಗಿಂತಲೂ ಹೆಚ್ಚು ತೂಕವಿರುವ 12.5 ಗ್ರಾಂ ಗಿಂತಲೂ ಹೆಚ್ಚು ಹಿಮೋಗ್ಲೋಬಿನ್ ಅಂಶ ಹೊಂದಿರುವ ಎಲ್ಲಾ ಆರೋಗ್ಯವಂತರೂ ರಕ್ತದಾನ ಮಾಡಬಹುದು. ಲಿವರ್ ಕಿಡ್ನಿ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರು,ಗರ್ಭಿಣಿಯರು, ಋತುಸ್ರಾವದಲ್ಲಿರುವವರು, ಹಾಲುಣಿಸುವ ತಾಯಂದಿರು, ರಕ್ತಹೀನತೆ, ಕ್ಯಾನ್ಸರ್, ಕ್ಷಯ,ಅಧಿಕ ರಕ್ತದೊತ್ತಡ, ಅಪಸ್ಮಾರ,ಮುಂತಾದ ತೊಂದರೆಗಳಿರುವವರು ರಕ್ತದಾನ ಮಾಡಬಾರದು.ರಕ್ತದಾನದ ಬಳಿಕ ಹೆಚ್ಚೆಂದರೆ ಒಂದು ತಾಸಿನ ವಿಶ್ರಾಂತಿ ಸಾಕು.ಮೂರು ತಿಂಗಳೊಳಗಾಗಿ ದಾನಿಯ ದೇಹದಲ್ಲಿ ರಕ್ತವು ಮರು ಉತ್ಪತ್ತಿಯಾಗುತ್ತದೆ. ದಾನಿಯಿಂದ ಪಡೆದ ರಕ್ತವನ್ನು ಸಾಮಾನ್ಯವಾಗಿ 35 ದಿನಗಳವರೆಗೆ ಮಾತ್ರ ವಿಶೇಷ ಶೀತಲೀಕರಣ ವ್ಯವಸ್ಥೆಯಲ್ಲಿ ಕಾಪಾಡಿ ಉಪಯೋಗಿಸಲು ಸಾಧ್ಯ.ರಕ್ತವನ್ನು ಕೇವಲ ದಾನದಿಂದಷ್ಟೇ ಪಡೆಯಬಹುದು. ಆದ್ದರಿಂದ ಸಹೃದಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಅವರು ವಿನಂತಿಸಿದ್ದಾರೆ...

ರಘುರಾಜ್ ಹೆಚ್.ಕೆ..9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!